ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

0

ಪುತ್ತೂರು: ಬ್ರಹ್ಮಕಲಶೋತ್ಸವದ ಸಿದ್ದತೆಯಲ್ಲಿರುವ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾಗಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ಅಭಿವೃದ್ದಿ ಕಾರ್ಯಕ್ಕೆ ಮುಂದಿನ ದಿನಗಳಲ್ಲಿ ಸಹಕರಿಸುವುದಾಗಿ ಸಂಸದರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಕೃಷ್ಣ ಬಡಿಕಿಲ್ಲಾಯರವರು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜನಾರ್ದನ‌ ಎರ್ಕಡಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಕೃಷ್ಣರಾಜ ಎರ್ಕಡಿತ್ತಾಯ, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಮನೋಹರ ನಾಯ್ಕ್ ಕೊಳಕ್ಕಿಮಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಧೀರ್ ಪ್ರಸಾದ್ ಆನಾಜೆ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ, ಕ್ಷೇತ್ರದ ವಿವಿಧ ಸಮಿತಿಯ ಪದಾಧಿಕಾರಿಗಳಾದ ಮೋಹನ್ ನಾಯ್ಕ್ ಆನಾಜೆ, ಜಗದೀಶ್ ನಾಯ್ಕ್ ಬಟ್ರುಪ್ಪಾಡಿ, ಅಬಿಜಿತ್ ಕೊಳಕ್ಕಿಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here