ಕುಂಬ್ರ ಶ್ರೀರಾಮ ಭಜನಾ ಮಂದಿರದಲ್ಲಿ ಭಜನೆ, ಅಯೋಧ್ಯೆ ನೇರಪ್ರಸಾರ ವೀಕ್ಷಣೆ

0

ಪುತ್ತೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರ ಲೋಕಾರ್ಪಣೆ, ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಕುಂಬ್ರ ಶ್ರೀ ರಾಮ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆಯಿಂದಲೇ ಆರಂಭವಾದ ಭಜನಾ ಕಾರ್ಯಕ್ರಮ ಮಧ್ಯಾಹ್ನದ ತನಕ ನಡೆದು ಮಂಗಳಾರತಿ ಬಳಿಕ ಅಯೋಧ್ಯೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಟಿವಿ ಮೂಲಕ ವೀಕ್ಷಣೆ ಮಾಡಲಾಯಿತು. ಹಲವು ಮಂದಿ ಭಕ್ತರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಅಲ್ಲದೆ ಅಯೋಧ್ಯೆ ಬಾಲರಾಮನ ಪ್ರತಿಷ್ಠೆ ಕಾರ್ಯಕ್ರಮವನ್ನು ಟಿವಿ ಪರದೆ ಮೂಲಕ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಮ ಮಂದಿರದ ಅಧ್ಯಕ್ಷ ಪದ್ಮನಾಭ ರೈ ಅರೆಪ್ಪಾಡಿ ಹಾಗೂ ಪದಾಧಿಕಾರಿಗಳು, ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರುಗಳು, ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here