ಸಬಳೂರು: ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನೆ ಅನ್ನಸಂತರ್ಪಣೆ

0

ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದ ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದ ವಠಾರದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯ ಅಂಗವಾಗಿ ಭಜನೆ, ಅನ್ನ ಸಂತರ್ಪಣೆ ಹಾಗೂ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಬೆಳಿಗ್ಗೆ ರಾಜೀವ ಪಟ್ಟೆದಮೂಲೆ ಅವರ ನೇತೃತ್ವದಲ್ಲಿ ಭಜನೆ, ಬಳಿಕ ನೇರ ಪ್ರಸಾರದ ವೀಕ್ಷಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅಯೋಧ್ಯಾ ಶಿಲಾಪೂಜನಾ ಸೇವಾಕರ್ತ ಕೆ.ಎಸ್.ಬಾಲಕೃಷ್ಣ ಕೊಲ್ಯ ಅವರು ತಮ್ಮ ಸೇವೆಯ ಅನುಭವ ಹಂಚಿಕೊಂಡರು. ಭಜನಾ ಮಂಡಳಿ ಮಾಜಿ ಅಧ್ಯಕ್ಷ ರಾಮಚಂದ್ರ ಏಣಿತ್ತಡ್ಕ ಸ್ವಾಗತಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here