ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ – ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಭಜನೆ, ಸೀಯಾಳಾಭಿಷೇಕ

0

ನೆಲ್ಯಾಡಿ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜ.22ರಂದು ಬೆಳಗ್ಗಿನಿಂದಲೇ ವಿವಿಧ ವೈದಿಕ ಕಾರ್ಯಕ್ರಮ, ಭಜನೆ ನಡೆಯಿತು.

ಬೆಳಿಗ್ಗೆ ನಿತ್ಯ ಭಜನೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಸೀಯಾಳಾಭಿಷೇಕ, ರಾಮ ತಾರಕ ಮಂತ್ರ, ಜಪಯಜ್ಞ, ಮಹಾಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ ನೂಜಿನ್ನಾಯರ ಪೌರೋಹಿತ್ಯದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು.

ಕರಸೇವಕರಿಗೆ ಗೌರವಾರ್ಪಣೆ:
ಅಯೋಧ್ಯೆ ಕರಸೇವೆಯಲ್ಲಿ ಭಾಗವಹಿಸಿದ್ದ ಕೃಷ್ಣಪ್ಪ ಗೌಡ ಕಟ್ಟೆಮಜಲು, ಕುಶಾಲಪ್ಪ ಗೌಡ ಪೂವಾಜೆ ಹಾಗೂ ದಿ.ಕುಡ್ತಾಜೆ ಉಮೇಶ ಗೌಡರ ಪರವಾಗಿ ಅವರ ಪುತ್ರ ಸುದರ್ಶನ್ ಅವರಿಗೆ ಗೌರವಾರ್ಪಣೆ ಮಾಡಲಾಯಿತು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಸದಾನಂದ ಕುಂದರ್, ಪ್ರಧಾನ ಕಾರ್ಯದರ್ಶಿ ಸುಧೀರ್‌ಕುಮಾರ್ ಕೆ.ಎಸ್., ಉಪಾಧ್ಯಕ್ಷ ರವಿಚಂದ್ರ ಹೊಸವೊಕ್ಲು, ಕೋಶಾಧಿಕಾರಿ ವಿನೋದ್‌ಕುಮಾರ್ ಬಾಕಿಜಾಲು, ಜೊತೆ ಕಾರ್ಯದರ್ಶಿ ಮೋಹನ ಕಟ್ಟೆಮಜಲು, ಸದಸ್ಯರು ಸೇರಿದಂತೆ ಹಲವು ಮಂದಿ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here