ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ-ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಶ್ರೀರಾಮೋತ್ಸವ

0

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ಹನುಮಗಿರಿಯ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಶ್ರೀಕೋದಂಡರಾಮ ಸ್ವಾಮಿಗೆ ವಿಶೇಷ ಪೂಜೆ ಮತ್ತು ಶ್ರೀರಾಮೋತ್ಸವ ನಡೆಯಿತು.

ಬೆಳಿಗ್ಗೆ ಭಜನೆ, ಸಾಮೂಹಿಕ ಶ್ರೀರಾಮತಾರಕ ಹೋಮ, ಶ್ರೀ ಕೋದಂಡರಾಮನಿಗೆ ಹಾಲು, ಸೀಯಾಳದಿಂದ ಅಭಿಷೇಕ, ಮದ್ಯಾಹ್ನ ಪುಷ್ಪಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ನೇರಪ್ರಸಾರವನ್ನು ಭಕ್ತರು ವೀಕ್ಷಿಸಿದರು. ಸಾವಿರಾರು ಭಕ್ತರು ಕೋದಂಡರಾಮನ ಪುಷ್ಪಾಭಿಷೇಕದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಮ ಪಿ, ಶಿವರಾಮ ಶರ್ಮಾ ಕತ್ರಿಬೈಲು, ನಾಗರಾಜ ಭಟ್ ನಡುವಡ್ಕ, ನಾರಾಯಣಿ ಅಮ್ಮ ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here