ಆತೂರು ದೇವಳದಲ್ಲಿ ಕರ ಸೇವಕರಿಗೆ ಸನ್ಮಾನ, ಶಿಲಾ ಪೂಜಾನ ಕಾರ್ಯಕರ್ತರಿಗೆ ಗೌರವಾರ್ಪಣೆ

0

ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀರಾಮ ಮಂದಿರ ಲೋಕರ್ಪಣೆ ಪ್ರಯುಕ್ತ ಬೆಳಿಗ್ಗೆ ಭಜನೆ, ದೇವಸ್ಥಾನದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ನೇತೃತ್ವದಲ್ಲಿ ನಾಗತಂಬಿಲ ಬಳಿಕ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ನಡೆಯಿತು.
ಈ ಸಂದರ್ಭ ಪ್ರಗತಿಪರ ಕೃಷಿಕ ಉದಯ ಕಶ್ಯಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮದ ಅಯೋಧ್ಯಾ ಕರಸೇವಕರಾದ ಯದುಶ್ರೀ ಆನೆಗುಂಡಿ, ಮಾಧವ ಆನೆಗುಂಡಿ ಅವರನ್ನು ಸನ್ಮಾನಿಸಲಾಯಿತು. ಶಿಲಾ ಪೂಜಾನದ ಸೇವಾಕರ್ತರಿಗೆ ಗೌರವಾರ್ಪಣೆ ನಡೆಯಿತು. ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ ಉಪಸ್ಥಿತರಿದ್ದರು. ಭವಾನಿಶಂಕರ ಪರಂಗಾಜೆ ಸ್ವಾಗತಿಸಿದರು. ಸಚಿನ್ ಪಟ್ಟೆ ವಂದಿಸಿದರು. ಸುಧೀಶ್ ಪಟ್ಟೆ ನಿರೂಪಿಸಿದರು.

LEAVE A REPLY

Please enter your comment!
Please enter your name here