ಮಿತ್ತೂರು ರಾಮನಗರ ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದಲ್ಲಿ ಅರ್ಧ ಏಕಭಜನೆ, ಕಲ್ಪೋಕ್ತ ಪೂಜೆ

0

ವಿಟ್ಲ: ಮಿತ್ತೂರು ರಾಮನಗರ ಶ್ರೀ ಸೀತಾರಾಮಾಂಜನೇಯ ಭಜನಾ ಮಂದಿರದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಅರ್ಧ ಏಕಭಜನೆ, ಹಾಗೂ ಕಲ್ಪೋಕ್ತ ಪೂಜೆ ನಡೆಯಿತು. ಬೆಳಗ್ಗೆ ಸೂರ್ಯೋದಯದ ಸಂದರ್ಭದಲ್ಲಿ ಅರ್ಧ ಏಕ ಭಜನೆಗೆ ಚಾಲನೆ‌ ನೀಡಲಾಯಿತು. ಸಾಯಂಕಾಲದ ವರೆಗೆ ವಿವಿಧ ಭಜನಾ‌ ತಂಡಗಳಿಂದ ಭಜನೆ ನಡೆಯಿತು. ಮಧ್ಯಾಹ್ನ ಕಲ್ಪೋಕ್ತ ಪೂಜೆ ನಡೆದು ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಿತು.
ಸಾಯಂಕಾಲ ಭಜನಾ ಮಂಗಲೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಸೀತಾರಾಮಾಂಜನೇಯ ಭಜನಾ ಸಮಿತಿಯ ಅಧ್ಯಕ್ಷ ಸಂಜೀವ ಪೂಜಾರಿ ದರ್ಬೆ, ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here