ಮೊಟ್ಟೆತ್ತಡ್ಕ ಮಣ್ಣಾಪು ಕೊರಗಜ್ಜ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಸತ್ಯನಾರಾಯಣ ಪೂಜೆ

0

ಪುತ್ತೂರು: ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನದ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ, ಭಜನಾ ಕಾರ್ಯಕ್ರಮ, ಗಣಹೋಮ, ಸತ್ಯನಾರಾಯಣ ಪೂಜೆ ಧಾರ್ಮಿಕ ವಿಧಿವಿಧಾನಗಳು ಜರಗಿತು.


ಅರ್ಚಕರಾದ ಕೃಷ್ಣ ಭಟ್ ರವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು, ದೈವದ ಪ್ರಧಾನ ಅರ್ಚಕ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ಮಧ್ಯಸ್ಥರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ಅಧ್ಯಕ್ಷ ವಿಶ್ವನಾಥ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ, ಕೋಶಾಧಿಕಾರಿ ಗುರುವ ಮಣ್ಣಾಪು, ಗೌರವ ಸಲಹೆಗಾರರಾದ ಗಂಗಾಧರ್ ಮಣ್ಣಾಪು, ಉದ್ಯಮಿ ಸದಾಶಿವ ಪೈ ಮತ್ತು ಫ್ಯಾಮಿಲಿ, ಗಿರಿಧರ್ ಗೌಡ ಆಮೆಮನೆ ಸಂಪ್ಯ, ದಿನೇಶ್ ಅತ್ತಾಳ, ಸುಜೀರ್ ಶೆಟ್ಟಿ ನುಳಿಯಾಲು ಸಹಿತ ಹಲವಾರು ಭಕ್ತರು ಉಪಸ್ಥಿತರಿದ್ದರು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಜ.24: ಶ್ರೀ ಕ್ಷೇತ್ರದಲ್ಲಿ..
ಜ.24 ರಂದು ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವದ ಕಾಲಾವಧಿ ತಂಬಿಲ ಜರಗಲಿದೆ.

LEAVE A REPLY

Please enter your comment!
Please enter your name here