ಜ.27: ಗೋಳಿತ್ತೊಟ್ಟು ಶಾಲೆಯಲ್ಲಿ ಮಹಾತ್ಮಗಾಂಧಿ ಪ್ರತಿಮೆ ಲೋಕಾರ್ಪಣೆ

0

ನೆಲ್ಯಾಡಿ: ನಿಲಿನಾ ಕೆ.ಜೋನ್ ನೆಲ್ಯಾಡಿ ಇವರ ಸವಿನೆನಪಿಗಾಗಿ ಕಡಬ ತಾಲೂಕಿನ ಗೋಳಿತ್ತೊಟ್ಟು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಿರ್ಮಾಣಗೊಂಡಿರುವ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರತಿಮೆ ಜ.27ರಂದು ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ.


ಕರ್ನಾಟಕ ಸರಕಾರದ ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಅವರು ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ. ನೆಲ್ಯಾಡಿಯ ಉದ್ಯಮಿ ಕೆ.ಪಿ.ತೋಮಸ್, ಗೋಳಿತ್ತೊಟ್ಟು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಜಯಂತಿ ಬಿ.ಎಂ., ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದೈಹಿಕ ಶಿಕ್ಷಣ ಶಿಕ್ಷಕರಾದ ಜೋನ್ ಕೆ.ಪಿ.ನೆಲ್ಯಾಡಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here