ಐಡಿಎ ಪುತ್ತೂರು ಶಾಖೆಯ ಪದಾಧಿಕಾರಿಗಳ ಪದಗ್ರಹಣ

0

ಪುತ್ತೂರು: ಇಂಡಿಯನ್ ಡೆಂಟಲ್ ಅಸೋಸಿಯೇಷನ್(ಐಡಿಎ)ಇದರ ಪುತ್ತೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.21ರಂದು ಐಡಿಎ ಭವನ ಪುತ್ತೂರು ಇಲ್ಲಿ ನಡೆಯಿತು.

ಐಡಿಎ ಪುತ್ತೂರು ಶಾಖೆಯ ನೂತನ ಅಧ್ಯಕ್ಷೆ ಡಾ.ಆಶಾ ಎ ಅವರಿಗೆ ಡಾ.ಕೃಷ್ಣಪ್ರಸಾದ್ ಅವರು ಪ್ರಮಾಣ ವಚನ ಬೋಧಿಸಿದರು.ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಮುಖ್ಯ ಅತಿಥಿಗಳಾಗಿದ್ದರು.

ಕೇಂದ್ರ ಕೌನ್ಸಿಲ್ ಸದಸ್ಯ ಡಾ.ರಾಘವೇಂದ್ರ ಪಿದಮಲೆ, ಸಂಘದ ಕೋಶಾಧಿಕಾರಿ ಡಾ.ಚರಣ್ ಕಜೆ, ಸಂಘದ ಪದಾಧಿಕಾರಿಗಳಾದ ಡಾ.ಶ್ರೀಪ್ರಕಾಶ್, ಡಾ.ಗಣೇಶ್‌ಚಿಂತನ್,ಡಾ.ಹರ್ಷ,ಡಾ.ವಿಶು ಕುಮಾರ್,ಡಾ.ಶಿವಾನಂದ,ಡಾ.ಆಶಾ ಜಿ.ಕೆ.,ಡಾ.ಅಂಜನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.ನಿಕಟಪೂರ್ವಾಧ್ಯಕ್ಷ ಡಾ.ಮುರಳೀಧರ ಭಟ್ ಸ್ವಾಗತಿಸಿ,ಕಾರ್ಯದರ್ಶಿ ಡಾ.ಕೀರ್ತನ್ ಕಜೆ ವಂದಿಸಿದರು.ಡಾ.ಆಶಾ ರಾಘವೇಂದ್ರ ಹಾಗೂ ಡಾ.ರಮ್ಯಾ ಕಜೆ ಅವರು ಕಾರ್ಯಕ್ರಮ ನಿರ್ವಹಿಸಿದರು.ಸಭಾ ಕಾರ್ಯಕ್ರಮದ ಬಳಿಕ ಐಡಿಎ ಸದಸ್ಯರು ಮತ್ತು ಸದಸ್ಯರ ಕುಟುಂಬ,ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here