ಕಲ್ಪಣೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ 64ನೇ ವರ್ಷದ ಅರ್ಧ ಏಕಾಹ ಭಜನೆ, ಪರಿವಾರ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಸರ್ವೆ ಗ್ರಾಮದ ಕಲ್ಪಣೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ವಾರ್ಷಿಕೋತ್ಸವ ಪ್ರಯುಕ್ತ 64ನೇ ವರ್ಷದ ಅರ್ಧ ಏಕಾಹ ಭಜನೆ, ಸಾರ್ವಜನಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಪರಿವಾರ ದೈವಗಳ ನೇಮೋತ್ಸವ ಫೆ.24ರಂದು ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ದೇವಸ್ಥಾನ ವಠಾರದಲ್ಲಿ ನಡೆಯಿತು.

ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಎಂ ಚಂದುಗೌಡ ಕಲ್ಪಣೆ, ಅಧ್ಯಕ್ಷ ಅಮರನಾಥ ರೈ ಸೊರಕೆ, ಮೋಹನ್ ಕುಮಾರ್ ಕಲ್ಪಣೆ, ಯದುಕುಮಾರ್, ಭವಿಷ್ ಕುಮಾರ್, ಚೇತನ್, ನೀಲಮ್ಮ, ಧನಲಕ್ಷ್ಮೀ, ಮಲ್ಲಿಕಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here