ನಲ್ಕ ಗೋಪಾಲಕೃಷ್ಣ ಆಚಾರ್, ವಿದ್ಯಾ ಆಚಾರ್ ಕೆಮ್ಮಾಯಿ ಇವರ ದಾಂಪತ್ಯ ಜೀವನದ ಸುವರ್ಣೋತ್ಸವ

0

ಪುತ್ತೂರು: ನಲ್ಕ ಗೋಪಾಲಕೃಷ್ಣ ಆಚಾರ್, ವಿದ್ಯಾ ಆಚಾರ್ ಕೆಮ್ಮಾಯಿ ಇವರ ದಾಂಪತ್ಯ ಜೀವನದ ಸುವರ್ಣೋತ್ಸವ ಕಾರ್ಯಕ್ರಮ ಜ.24ರಂದು ಪುತ್ತೂರು ಕೋ‌ ಓಪರೇಟಿವ್ ಟೌನ್ ಬ್ಯಾಂಕ್ ಸಭಾಗಂಗಣದಲ್ಲಿ ನಡೆಯಿತು. ಆರಂಭದಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು.
ಹಿರಿಯ ಸಾಹಿತಿ ಪ್ರೊ. ವಿ ಬಿ ಅರ್ತಿಕಜೆ, ಡಿ. ಎಸ್ ಭಟ್, ಪ್ರೊ. ಹರಿನಾರಾಯಣ ಮಾಡಾವು, ಪಿ ಜಿ ನಾರಾಯಣ, ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಿ ಐತ್ತಪ್ಪ ನಾಯ್ಕ್, ಮೋಹನ್, ಎಸ್ ವಾಸುದೇವ ಆಚಾರ್ಯ, ಪ್ರೋ.ವತ್ಸಲರಾಜ್ಞಿ ಅವರು ದೀಪ ಪ್ರಜ್ವಲಿಸುವ ಮೂಲಕ ಸುವರ್ಣೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ನಲ್ಕ ಗೋಪಾಲಕೃಷ್ಣ ಆಚಾರ್ ಅವರ ಬಾಲ್ಯದ ಸಹಪಾಠಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ ಸವಣೂರು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಗದೀಶ್ ಆಚಾರ್ಯ ಮತ್ತು ಬಳಗದಿಂದ ಸಂಗೀತ ಗಾನ ವೈಭವ ನಡೆಯಿತು. ಕೃಷ್ಣಪ್ರಸಾದ್ ಕಾರ್ಯಕ್ರಮ‌ ನಿರ್ವಹಿಸಿದರು. ಉದಯ ಆಚಾರ್ಯ ಸಂಗೀತ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇ.ಮೂ.ವಿಶ್ವೇಶ್ವರ ಭಟ್ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು.

LEAVE A REPLY

Please enter your comment!
Please enter your name here