ಅಂಬಿಕಾದ ವಿದ್ಯಾರ್ಥಿಗಳಿಂದ ಪ್ರಜ್ಞಾ ಆಶ್ರಮಕ್ಕೆ ಭೇಟಿ

0

ಪುತ್ತೂರು : ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಬಪ್ಪಳಿಗೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ವತಿಯಿಂದ ಸ್ಕೌಟ್ ಗೈಡ್ಸ್ ವಿದ್ಯಾರ್ಥಿಗಳು ಶ್ರೀ ರಾಮ ಜನ್ಮ ಭೂಮಿಯಲ್ಲಿ ನಡೆದ ಶ್ರೀರಾಮನ ಪ್ರತಿಷ್ಠಾಪನೆಯ ದಿನ ಬೀರಮಲೆಯ ಪ್ರಜ್ಞಾ ಆಶ್ರಮಕ್ಕೆ ಭೇಟಿ ನೀಡಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ವಿದ್ಯಾರ್ಥಿಗಳು ಪ್ರಜ್ಞಾ ಆಶ್ರಮದ ಮಾನಸಿಕ ವಿಕಲಚೇತನರ ಕ್ಷೇಮ ಸಮಾಚಾರ ವಿಚಾರಿಸಿದರು. ಭಜನೆ ಹಾಗೂ ನೃತ್ಯದಲ್ಲಿ ಪಾಲ್ಗೊಂಡರು. ಅವರಿಗೆ ಸಿಹಿಯನ್ನು ಹಂಚಿದರು. ಅಲ್ಲದೆ ಈ ವಿಶೇಷ ದಿನ ತಮ್ಮಿಂದ ಏನಾದರೂ ಸಮಾಜಕ್ಕೆ ಕೊಡಬೇಕು ಎಂಬ ನೆಲೆಯಲ್ಲಿ ಒಂದು ಹೊತ್ತಿನ ಊಟದ ವ್ಯವಸ್ಥೆಯನ್ನು ಒದಗಿಸಿ ಕೊಟ್ಟರು. ಸಮಾರಂಭದಲ್ಲಿ ವಿದ್ಯಾಲಯದ ಸ್ಕೌಟ್ ಮಾಸ್ಟರ್ ಸತೀಶ್ ಇರ್ದೆ, ಗೈಡ್ಸ್ ಶಿಕ್ಷಕಿ ಚಂದ್ರಕಲಾ ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here