ಜ.28: ಪುರುಷರಕಟ್ಟೆಯಲ್ಲಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 22ನೇ ಶಾಖೆ ಶುಭಾರಂಭ

0

ಪುತ್ತೂರು: ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ’ ಹಾಗೂ ರಾಜ್ಯ ಮಟ್ಟದ ‘ಉತ್ತಮ ಸಹಕಾರ ಸಂಘ ಪ್ರಶಸ್ತಿ’ ಪುರಸ್ಕೃತವಾದ ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 22ನೇ ಶಾಖೆಯು ಜ.28ರಂದು ನರಿಮೊಗರು ಗ್ರಾಮದ ಪುರುಷರಕಟ್ಟೆ ಸಿದ್ದಣ್ಣ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ.


2007-08ರಲ್ಲಿ ಬೆಳ್ತಂಗಡಿಯಲ್ಲಿ ಪ್ರಾರಂಭವಾದ ಸಂಘವು ಮೈಸೂರು ಪ್ರಾಂತ್ಯದ ಕಾರ್ಯವ್ಯಾಪ್ತಿಯನ್ನು ಹೊಂದಿದೆ. ಸಂಘದಲ್ಲಿ 40000ಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು ರೂ.166ಕೋಟಿ ಠೇವಣಿ, ರೂ.146ಕೋಟಿ ಸಾಲ ಹಂಚಿಕೆ ಹಾಗೂ ರೂ.1000 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸುತ್ತಿದೆ. ಸಂಘವು ಪ್ರಸ್ತುತ ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿ ಹಾಗೂ ಶಿರ್ತಾಡಿ, ಕಲ್ಲಡ್ಕ, ಕಕ್ಕಿಂಜೆ, ಬೆಳುವಾಯಿ, ನೆಲ್ಯಾಡಿ, ಮುಡಿಪು, ವೇಣೂರು, ಉಪ್ಪಿನಂಗಡಿ, ಕಡಬ, ಬ್ರಹ್ಮಾವರ, ಹಳೆಯಂಗಡಿ, ಕುಪ್ಪೆಪದವು, ಬಜಗೋಳಿ, ಅರಸಿನಮಕ್ಕಿ, ಸಿದ್ದಕಟ್ಟೆ, ಅಜೆಕಾರು, ಹಿರಿಯಡ್ಕ, ಪಡೀಲ್, ಕಬಕ, ಹೊಸ್ಮಾರುಗಳಲ್ಲಿ ಶಾಖೆಗಳನ್ನು ಹೊಂದಿದ್ದು 22ನೇ ಶಾಖೆ ಪುರುಷರಕಟ್ಟೆಯಲ್ಲಿ ಪ್ರಾರಂಭಗೊಳ್ಳುತ್ತಿದೆ.


ಸಂಘದ ಉತ್ತಮ ಸೇವೆ ಹಾಗೂ ಸಾಧನೆಗೆ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉತ್ತಮ ಸಹಕಾರ ಸಂಘ ಪ್ರಶಸ್ತಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತ 7 ವರ್ಷದಿಂದ ಸಾಧನಾ ಪ್ರಶಸ್ತಿ, ಯುವವಾಹಿನಿ ಕೇಂದ್ರ ಸಮಿತಿಯಿಂದ ಸಾಧನಾ ಶ್ರೇಷ್ಠ ಪ್ರಶಸ್ತಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಬ್ರಹ್ಮಶ್ರೀ ಸಹಕಾರ ಸಾಧನಾ ಪ್ರಶಸ್ತಿ ಹಾಗೂ ಯುವವಾಹಿನಿ ಘಟಕದಿಂದ ಸಾಧನಾ ಪ್ರಶಸ್ತಿಗಳು ಲಭಿಸಿದೆ.


ಸಂಘದ ವೈಶಿಷ್ಠ್ಯತೆ ಹಾಗೂ ಸೌಲಭ್ಯಗಳು:
ಸಂಘವು ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ, ದುಡಿಯುವ ಬಂಡವಾಳದಲ್ಲಿ ನಿರಂತರ ಪ್ರಗತಿ, ಕೋರ್ ಬ್ಯಾಂಕಿಂಗ್ ಸೌಲಭ್ಯ, ಎಲ್ಲಾ ಶಾಖೆಗಳಲ್ಲೂ ಸಿ.ಸಿ ಕ್ಯಾಮರಾ ಮತ್ತು ಭದ್ರತಾ ಕೊಡಿಯೊಂದಿಗೆ ಭದ್ರತೆಗೆ ಹೆಚ್ಚು ಪ್ರಾಶಸ್ತ್ಯ, ಕ್ರಿಯಾಶೀಲ ನಿರ್ದೇಶಕರು, ಶೀಘ್ರದಲ್ಲಿ ಸಾಲ ಮಂಜೂರಾತಿ, ಕೃಷಿಯೇತರ ಎಲ್ಲಾ ರೀತಿಯ ಸಾಲ ಸೌಲಭ್ಯಗಳನ್ನು ಹೊಂದಿದೆ. ಗ್ರಾಹಕರ ಅನುಕೂಲಕ್ಕಾಗಿ ಶೀಘ್ರದಲ್ಲಿ ಚಿನ್ನಾಭರಣ ಸಾಲ, ಇ-ಸ್ಟಾಂಪಿಂಗ್, ಠೇವಣಿಗೆ ಆಕರ್ಷಕ ಬಡ್ಡಿ, ಆರ್‌ಟಿಜಿಎಸ್, ನೆಫ್ಟ್ ಸೌಲಭ್ಯ, ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಕೃಷಿಯೇತರ ಸಾಲ ಸೌಲಭ್ಯ, ಹಿರಿಯ ನಾಗರೀಕರಿಗೆ, ಸಂಘ ಸಂಸ್ಥೆಗಳ ಶೇ.0.5 ಹೆಚ್ಚುವರಿ ಬಡ್ಡಿ, ಮಲ್ಟಿಸಿಟಿ ಚೆಕ್, ಡಿಡಿ ಸೌಲಭ್ಯ, ವೆಸ್ಟರ್ನ್ ಯೂನಿಯನ್, ಎಕ್ಸ್‌ಪ್ರೆಸ್ ಮನಿ&ರಿಯಾ ಮನಿ ಟ್ರಾನ್ಸಫರ್ ಮೂಲಕ ವಿದೇಶಿ ಹಣ ವರ್ಗಾವಣೆ, ಆಯ್ದ ಶಾಖೆಗಳಲ್ಲಿ ಸೇಫ್ ಲಾಕರ್, ಇಪ್ಕೋ-ಟೋಕಿಯೋ ವಿಮಾ ಸೌಲಭ್ಯ ಹಾಗೂ ಆರ್‌ಟಿಸಿ(ಪಹಣಿ ಪತ್ರ) ಮೊದಲಾದ ಸೌಲಭ್ಯಗಳನ್ನು ಸಂಘದ ಮೂಲಕ ನೀಡಲಾಗುತ್ತಿದೆ.


ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶ್ರೀಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಶಾಖಾ ಕಚೇರಿ ಉದ್ಘಾಟಿಸಲಿದ್ದಾರೆ. ನರಿಮೊಗರು ಗ್ರಾ.ಪಂ ಅಧ್ಯಕ್ಷೆ ಹರಿಣಿ ನಿತ್ಯಾನಂದ ಭದ್ರತಾ ಕೋಶವನ್ನು ಉದ್ಘಾಟಿಸಲಿದ್ದಾರೆ. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ. ಗಣಕಯಂತ್ರವನ್ನು ಉದ್ಘಾಟಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ನಿರಖು ಠೇವಣಿ ಸರ್ಟಿಫಿಕೇಟ್ ವಿತರಿಸಲಿದ್ದಾರೆ. ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಉಳಿತಾಯ ಖಾತೆ ಪುಸ್ತಕ ವಿತರಿಸಲಿದ್ದಾರೆ. ಮುಂಡೂರು ಶ್ರೀಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕಪ್ಪ ಗೌಡ ಕರೆಮನೆ, ಸಂಪ್ಯ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು, ಪ್ರಗತಿಪರ ಕೃಷಿಕ ಕೆ.ಎಸ್ ಚಂದ್ರಶೇಖರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನರಿಮೊಗರು ಗ್ರಾ.ಪಂ ಸದಸ್ಯ ನವೀನ್ ಕುಮಾರ್ ರೈ, ಬಿಲ್ಲವ ನರಿಮೊಗರು ಗ್ರಾಮ ಸಮಿತಿ ಅಧ್ಯಕ್ಷ ವೇದನಾಥ ಸುವರ್ಣ, ಶಾಂತಿಗೋಡು ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ಕೆ. ಕಲ್ಕಾರ್, ಮುಂಡೂರು ಗ್ರಾಮ ಸಮಿತಿ ಅಧ್ಯಕ್ಷ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ಸರ್ವೆ ಗ್ರಾಮ ಸಮಿತಿ ಅಧ್ಯಕ್ಷ ರಾಮಕೃಷ್ಣ ಸರ್ವೆದೋಳಗುತ್ತು ಹಾಗೂ ಸಿದ್ದಣ್ಣ ಕಾಂಪ್ಲೆಕ್ಸ್ ಮ್ಹಾಲಕ ನವೀನ್ ಪ್ರಭು ಗೌರವ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here