ಪುಣ್ಚಪ್ಪಾಡಿ ಶಾಲಾ ರಂಗಮಂದಿರ ಹಾಗೂ ಗ್ರಂಥಾಲಯ ಕೊಠಡಿಗೆ ಶ್ರೀ ಕ್ಷೇ.ಧ.ಗ್ರಾ.ಯೋ.ಯಿಂದ 75 ಸಾವಿರ ಮಂಜೂರು

0

ಸವಣೂರು: ಕಡಬ ತಾಲೂಕಿನ ಪುಣ್ಚಪ್ಪಾಡಿ ಹಿ.ಪ್ರಾ. ಶಾಲಾ ರಂಗಮಂದಿರ ಮತ್ತು ಗ್ರಂಥಾಲಯ ಕೊಠಡಿಗೆ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 75,000 ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಶಾಲಾಭಿವೃದ್ದಿ ಸಮಿತಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯ ಮೇಲ್ವಿಚಾರಕ ಹರ್ಷಕುಮಾರಿ, ಪುಣ್ಚಪ್ಪಾಡಿ ಒಕ್ಕೂಟದ ಅಧ್ಯಕ್ಷ ವಿಜಯ ಕುಚ್ಚೆಜಾಲು, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ್ ಸುಲಾಯ, ಗ್ರಾಮ ಪಂಚಾಯತ್ ಸದಸ್ಯೆ ಮತ್ತು ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಜತೆ ಕಾರ್ಯದರ್ಶಿ ಯಶೋಧಾ, ಸೇವಾ ಪ್ರತಿನಿಧಿ ಅಮಿತಾ ಎನ್, ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಗಾಯತ್ರಿ ಓಂತಿಮನೆ, ಸದಸ್ಯರಾದ ಯಮುನಾ, ಶಾಲಾ ಮುಖ್ಯಗುರು ರಶ್ಮಿತಾ ನರಿಮೊಗರು ಹಾಗೂ ಶಿಕ್ಷಕರು ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here