![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ನೀರ್ಕಜೆ ತರವಾಡು ಮನೆಯ ಧರ್ಮದೈವ ರುದ್ರಚಾಮುಂಡಿ, ಪರಿವಾರ ದೈವಗಳ ನವಕಕಲಶಾಭಿಷೇಕ, ನೇಮೋತ್ಸವ ಜ.28ರಂದು ನೀರ್ಕಜೆ ತರವಾಡು ಮನೆಯಲ್ಲಿ ನಡೆಯಲಿದೆ. ಬೆಳಿಗ್ಗೆ 7.30 ರಿಂದ ಶ್ರೀ ಮಹಾಗಣಪತಿ ಹೋಮ, ಮುಡಿಪು ಪೂಜೆ, ನಾಗದೇವರಿಗೆ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಆಶ್ಲೇಷ ಬಲಿ, ನಾಗತಂಬಿಲ, ಮಹಾಪೂಜೆ ಹಾಗೂ ಧರ್ಮ ದೈವ ರುದ್ರ ಚಾಮುಂಡಿ ಮತ್ತು ಪರಿವಾರ ದೈವಗಳ ನವಕ ಕಲಶಾಭಿಷೇಕ ಹಾಗೂ ದೈವಗಳಿಗೆ ತಂಬಿಲ, ಪ್ರಸನ್ನ ಪೂಜೆ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ದೈವಗಳ ಭಂಡಾರ ತೆಗೆದು ಬಳಿಕ 7 ಗಂಟೆಗೆ ಸತ್ಯನಾರಾಯಣ ಪೂಜೆಯ ಮಹಾಮಂಗಳಾರತಿ, ರಾತ್ರಿ ಗಂಟೆ 7.30ರ ಬಳಿಕ ಸತ್ಯದೇವತೆ, ಕಲ್ಲುರ್ಟಿ, ಪಂಜುರ್ಲಿ, ಧರ್ಮದೈವ ರುದ್ರಚಾಮುಂಡಿ ಹಾಗೂ ರಾಹು ಗುಳಿಗ ದೈವಗಳಿಗೆ ನೇಮೋತ್ಸವ ನಡೆಯಲಿರುವುದು.