ಫೆ.17ರಿಂದ ಫೆ.24ರ ವರೆಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ : ಸಿದ್ದತಾ ಸಭೆ-ಫೆ.4 ರಂದು ನೂತನ ಮಹಾದ್ವಾರ ,ರಸ್ತೆ ಉದ್ಘಾಟನೆ

0

ಪುತ್ತೂರು :ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.17ರಿಂದ ಫೆ.24ರ ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿವಿಧ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು ಅವರು, 20 ವರ್ಷಗಳ ಬಳಿಕ ನಳೀಲು ಕ್ಷೇತ್ರದ ಬ್ರಹ್ಮಕಲಶೋತ್ಸವ ನಡೆಯುತ್ತಿದೆ.ಈಗಾಗಲೇ ಸಿದ್ದತೆಗಳು ನಡೆಯುತ್ತಿದೆ.ನೂತನವಾಗಿ ನಿರ್ಮಾಣಗೊಂಡ ಮಹಾದ್ವಾರ ಹಾಗೂ ಅಭಿವೃದ್ಧಿಗೊಂಡಿರುವ ದೇವಸ್ಥಾನದ ಸಂಪರ್ಕ ರಸ್ತೆಯ ಉದ್ಘಾಟನೆಯನ್ನು ಫೆ.4 ರಂದು ನಡೆಸುವ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ  ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜ.28 : ಎಲ್ಲಾ ಸಮಿತಿಗಳ ಸಭೆ
ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಎಲ್ಲಾ ಸಮಿತಿಗಳ ಸದಸ್ಯರ ಸಭೆಯನ್ನು ಜ.28ರಂದು ಸಂಜೆ 4.30ಕ್ಕೆ ಕರೆಯಲಾಗಿದ್ದು, ಎಲ್ಲರೂ ಈ ಸಭೆಗೆ ಆಗಮಿಸುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here