ಮಂಗಳೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ಮಂಗಳೂರು ವಲಯದ ಆಭಿಯೋಜನ ಇಲಾಖೆ ವತಿಯಿಂದ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿರುವ ಅಭಿಯೋಜನ ಕಚೇರಿ ಆವರಣದಲ್ಲಿ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು .ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ಸರಕಾರಿ ಅಭಿಯೋಜಕರಾದ ಶೇಖರ್ ಶೆಟ್ಟಿ ಅವರು ಧ್ವಜರೋಹಣ ನೆರವೇರಿಸಿದರು.

ಅಭಿಯೋಜನಾ ಇಲಾಖೆ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್ ಆಳ್ವ ಕೆ, ಸರಕಾರಿ ಅಭಿಯೋಜಕರುಗಳಾದ ಜುಡಿತ್ ಒಳ್ಗರೆಟ್ ಪಿಂಟೋ, ಮೋಹನ್ ಕುಮಾರ್ , ಸಹಾಯಕ ಸರಕಾರಿ ಅಭಿಯೋಜಕರುಗಳಾದ ಗೀತಾ, ಸರಸ್ವತಿ, ಮನೋಜ್ ಕುಮಾರ್ ಸಹನಾ ದೇವಿ, ಅಪರ ಜಿಲ್ಲಾ ಸರ್ಕಾರಿ ವಕೀಲರು, ಸೇರಿದಂತೆ ವಕೀಲರ ಸಂಘದ ಅಧ್ಯಕ್ಷ,ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ,ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು . ಸಹಾಯಕ ಸರಕಾರಿ ಅಭಿಯೋಜಕ ಪುತ್ತೂರಿನ ಜನಾರ್ದನ್ ಬಿ. ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here