ತೆಗ್ಗು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ಕೆಯ್ಯೂರು ಗ್ರಾಮದ ತೆಗ್ಗು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕೆಯ್ಯೂರು ಗ್ರಾಪಂ ಸದಸ್ಯ ಅಬ್ದುಲ್ ಖಾದರ್ ಮೇರ್ಲರವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಶುಭಾಶಯ ಕೋರಿದರು. ನಿವೃತ್ತ ಮುಖ್ಯಗುರು ಕಿರಣ್ ರಾಜ್‌ರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಾಶಯ ಕೋರಿದರು. ಸಹಶಿಕ್ಷಕ ಸಂದೇಶ್‌ರವರು ಸಂವಿಧಾನದ ಮಹತ್ವವನ್ನು ತಿಳಿಸಿದರು. ಎಸ್‌ಡಿಎಂಸಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷೆ ಅಸ್ಮಾ, ಸದಸ್ಯರು, ಪೋಷಕರು,ಶಿಕ್ಷಕರು,ಅಡುಗೆ ಸಿಬ್ಬಂದಿಗಳು,ಸ್ಥಳೀಯರಾದ ಗಣೇಶ್ ರೈ ತೆಗ್ಗು ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಗುರು ರಶ್ಮಿತಾ ಸ್ವಾಗತಿಸಿದರು. ಸಹಶಿಕ್ಷಕ ರಾಜೇಶ್ ವಂದಿಸಿದರು.ಶಿಕ್ಷಕಿ ನಳಿನಿ ಸಹಕರಿಸಿದರು.

LEAVE A REPLY

Please enter your comment!
Please enter your name here