ಇಡ್ಯಡ್ಕಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕಾಣಿಯೂರು: ಇಡ್ಯಡ್ಕ ಸ. ಹಿ. ಪ್ರಾ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ ಇಡ್ಯಡ್ಕರವರು ಧ್ವಜೋರೋಹಣ ನೆರವೇರಿಸಿ ಶುಭಹಾರೈಸಿದರು. ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ ಮಾತನಾಡಿ, ಮಕ್ಕಳು ಪಾಠದಲ್ಲಿ ಮಾತ್ರವಲ್ಲ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದರು.

ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಇಡ್ಯಡ್ಕ ಅಂಗನವಾಡಿಯ ಪುಟಾಣಿಗಳು, ಪೋಷಕರು ಭಾಗವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಮತ್ತು ಅಂಗನವಾಡಿ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಗೌಡರವರು ಸ್ಥಾಪಿಸಿದ ದತ್ತಿನಿಧಿಯನ್ನು ಮಕ್ಕಳಿಗೆ ವಿತರಿಸಲಾಯಿತು. ಚಾರ್ವಾಕ ಹಾಲು ಉದ್ಪಾದಕರ ಸಹಕಾರಿ ಸಂಘದ ವತಿಯಿಂದ ಇವರು ಕೊಡಮಾಡುವ ಧನ ಸಹಾಯವನ್ನು ಮಕ್ಕಳಿಗೆ ವಿತರಿಸಲಾಯಿತು. ಶಾಲಾ ಪ್ರಭಾರ ಮುಖ್ಯಗುರು ಛತ್ರ ಕುಮಾರ್, ಸ್ವಾಗತಿಸಿ ವಂದಿಸಿದರು. ಗೌರವ ಶಿಕ್ಷಕಿ ಮೋಹಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here