SDPI ಸಂಟ್ಯಾರ್ ಬೂತ್ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

0

ಪುತ್ತೂರು : ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು SDPI ಸಂಟ್ಯಾರ್ ಬೂತ್ ಸಮಿತಿ ವತಿಯಿಂದ ಸಂಟ್ಯಾರಿನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು SDPI ಸಂಟ್ಯಾರ್ ಬೂತ್ ಸಮಿತಿ ಅಧ್ಯಕ್ಷ ಮಸೂದ್ ಇವರು ನೆರವೇರಿಸಿಕೊಟ್ಟರು.SDPI ಪುತ್ತೂರು ವಿಧಾನಸಭಾ ಪಕ್ಷ ಸಂಘಟನಾ ಕಾರ್ಯದರ್ಶಿ ರಿಯಾಝ್ ಬಳಕ್ಕರವರು ಸಂದೇಶ ಭಾಷಣ ಮಾಡಿದರು.ಬದ್ರಿಯಾ ಜುಮಾ ಮಸೀದಿ ಸಂಟ್ಯಾರ್ ಇದರ ಜಮಾಅತ್ ಕಮಿಟಿ ಅಧ್ಯಕ್ಷ ಫಾರೂಖ್ ಸಂಟ್ಯಾರ್ ಹಾಗೂ SSF ಮುಖಂಡರಾದ C M ಅಬ್ದುಲ್ಲಾ ಅತಿಥಿ ಭಾಷಣ ಮಾಡಿದರು.

ರಫೀಕ್ ಎಚ್‌ ಇ ರವರು ಪ್ರತಿಜ್ಞಾ ವಿಧಿ ಬೋಧಿಸಿದರು.ವೇದಿಕೆಯಲ್ಲಿ ಬದ್ರಿಯಾ ಜುಮಾ ಮಸೀದಿ ಸಂಟ್ಯಾರ್ ಇದರ ಜಮಾಅತ್ ಕಮಿಟಿ ಪ್ರಧಾನ ಕಾರ್ಯದರ್ಶಿ ಹಮೀದ್ ಕಲ್ಲರ್ಪೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆರ್ಯಾಪು ಇದರ ನಿರ್ದೇಶಕ ಶಂಸುದ್ದೀನ್ ಕಲ್ಲರ್ಪೆ, ಬದ್ರಿಯಾ ಜುಮಾ ಮಸೀದಿ ಸಂಟ್ಯಾರ್ ಇದರ ಜಮಾಅತ್ ಕಮಿಟಿ ಮಾಜಿ ಅಧ್ಯಕ್ಷ ರಝಾಕ್ ಸಂಟ್ಯಾರ್ , ಉದ್ಯಮಿ ಅನ್ವರ್ ಎಚ್‌ ಪಿ ಹಾಗೂ ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ಇದರ ಮಾಜಿ ಅಧ್ಯಕ್ಷ ಬಶೀರ್ ಮರಿಕೆ ಉಪಸ್ಥಿತರಿದ್ದರು. ಝಕರಿಯಾ ಅತಿಥಿಗಳನ್ನು ಸ್ವಾಗತಿಸಿ ,ವಂದಿಸಿದರು.ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಡಿನ ಬಾಂಧವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here