ಜ.27: ಬಿಎಂಎಸ್ ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಮಹಾಸಭೆ

0

ಪುತ್ತೂರು: ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ 42ನೇ ವಾರ್ಷಿಕ ಮಹಾಸಭೆಯು ಜ.27ರಂದು ಮಧ್ಯಾಹ್ನ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಮಧ್ಯಾಹ್ನ ಜರುಗಲಿದೆ.


ಸಂಘದ ಕಾರ್ಯಕ್ರಮದಲ್ಲಿ 2024ನೇ ಸಾಲಿನ ಬಿಎಂಎಸ್ ಆಟೋ ಸಾರಥಿಯಾಗಿ ಆಯ್ಕೆಯಾದ ಹಿರಿಯ ಆಟೋ ಸಾರಥಿಗಳಿಗೆ ಗೌರವ ಕಾರ್ಯಕ್ರಮ ನಡೆಯಲಿದೆ. ಸಂಘದ ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್, ಮೆಸ್ಕಾಂ ನಿರ್ದೇಶಕ ಕಿಶೋರ್ ಬೊಟ್ಯಾಡಿ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್, ಧಾರ್ಮಿಕ ಮುಂದಾಲು ಎನ್ ರವೀಂದ್ರ ಶೆಟ್ಟಿ ನುಳಿಯಾಲು, ಪುತ್ತೂರು ಸಂಚಾರ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಆಟೋ ರಿಕ್ಷಾ ಚಾಲಕರ ಮಾಲಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಸುಧಾಕರ್ ನಾಯಕ್, ಕಾನೂನು ಸಲಹೆಗಾರ ಮಾಧವ ಪೂಜಾರಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ರಾಜೇಶ್ ಕೆ ಮರೀಲ್ ಅವರು ತಿಳಿಸಿದರು.

LEAVE A REPLY

Please enter your comment!
Please enter your name here