ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

0

ಪುತ್ತೂರು: ಉಪ್ಪಿನಂಗಡಿ ಶ್ರೀ ಆದಿಚುಂಚನಗಿರಿ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಉಪ್ಪಿನಂಗಡಿ ಸಿಎ ಬ್ಯಾಂಕ್ ನಿರ್ದೇಶಕ,ಪೆರಿಯಡ್ಕ ಹಾಲು ಉತ್ಪಾದಕ ಸಂಘದ ನಿರ್ದೇಶಕ ಜಗದೀಶ್ ರಾವ್ ಮಣಿಕ್ಕಳ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ದೇಶ ರಕ್ಷಣೆ, ದೇಶದ ಪ್ರಗತಿಗೆ ಸದಾ ಸನ್ನದ್ಧರಾಗಿರಬೇಕು. ಸಮಾಜದಲ್ಲಿ ನಿಮ್ಮನ್ನು ನೀವು ತೊಡಗಿಸಿ ಕೊಂಡಾಗ ಜ್ಞಾನ ಸಂಪನ್ನರಾಗಿ ಬೆಳೆಯುತ್ತೀರ ಎಂದು ಶುಭ ಹಾರೈಸಿದರು.

ಸಂಸ್ಥೆಯ ಪರಿವೀಕ್ಷಕ ಬಾಲಕೃಷ್ಣ ಬಿ‌.ಟಿ. ಪ್ರಜಾಪ್ರಭುತ್ವದ ಆಚರಣೆಯ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ಪಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ದೈಹಿಕ ಶಿಕ್ಷಕ ಮೋಹನ್ ಎಚ್ ವಂದಿಸಿದರು. ಶಿಕ್ಷಕಿ ಶಕುಂತಲಾ ಕೆ. ಸವಿತಾ ಪಿ.ಸಿ ಮತ್ತು ಡೊಂಬಯಗೌಡ ಸಹಕರಿಸಿದರು.

LEAVE A REPLY

Please enter your comment!
Please enter your name here