ಕಾವು ತುಡರ್ ಯುವಕ ಮಂಡಲದಿಂದ ಕೃಷಿ ಮಾಹಿತಿ ಕಾರ್ಯಾಗಾರ

0

ಕಾವು: ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಸಂತ ಫಿಲೋಮಿನಾ ಕಾಲೇಜು ಪುತ್ತೂರು ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ತುಡರ್ ಯುವಕ ಮಂಡಲ ರಿ. ನನ್ಯ-ಕಾವು ಇವರ ಸಯುಕ್ತ ಆಶ್ರಯದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರವು ಜ.26ರಂದು ತುಡರ್ ಸದನದಲ್ಲಿ ನಡೆಯಿತು.ಅರಿಯಡ್ಕ ಗ್ರಾ.ಪಂ ಸದಸ್ಯ ಲೋಕೇಶ್ ಚಾಕೋಟೆಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕ ಶೀತಲ್ ಕುಮಾರ್ ರವರು ಮುಖ್ಯ ಅತಿಥಿಯಾಗಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈಯವರು ಕೃಷಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು.ತುಡರ್ ಯುವಕ ಮಂಡಲದ ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆಯವರು ಸಭಾಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಅರಿಯಡ್ಕ ಗ್ರಾ.ಪಂ ಸದಸ್ಯರಾದ ಅನಿತಾ ಆಚಾರಿಮೂಲೆ, ಹೇಮಾವತಿ ಚಾಕೋಟೆಯವರು ಉಪಸ್ಥಿತರಿದ್ದರು.
ಸಂತ ಫಿಲೋಮಿನಾ ಕಾಲೇಜಿನ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳಾದ ದೀಕ್ಷಿತ್ ರೈ ಸ್ವಾಗತಿಸಿ, ಅರುಣ್ ವಂದಿಸಿದರು. ಸುಬ್ರಹ್ಮಣ್ಯರವರು ಕಾರ್ಯಕ್ರಮ ನಿರ್ವಹಿಸಿದರು. ತುಡರ್ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರುಗಳು ಸಹಕರಿಸಿದರು.

LEAVE A REPLY

Please enter your comment!
Please enter your name here