ನಿಡ್ಪಳ್ಳಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ನಿಡ್ಪಳ್ಳಿ; ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ 75 ನೇ ವರ್ಷದ ಗಣರಾಜ್ಯೊತ್ಸವ ಆಚರಿಸಲಾಯಿತು.ಎಸ್.ಡಿ.ಎಂ.ಸಿ ಅಧ್ಯಕ್ಷ ಕರುಣಾಕರ ರೈ ಮುಂಡೂರು ಧ್ವಜಾರೋಹಣ ಮಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಹಶಿಕ್ಷಕಿ ಶ್ರೀದೇವಿ ಗಣರಾಜ್ಯೋತ್ಸವದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶಾಲಿನಿ, ಸದಸ್ಯ ಮೋಹನ, ಅಂಗನವಾಡಿ ಕಾರ್ಯಕರ್ತೆ ಜಯಂತಿ.ಕೆ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಗಂಗಾಧರ ಸಿ.ಎಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕಿ ಸುಮ.ಡಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಹೇಮಾ. ಎನ್  ಪ್ರಾಸ್ತಾವಿಕವಾಗಿ ಮಾತನಾಡಿದರು.ಪೋಷಕಿ ಭಾರತಿ ಮುಂಡೂರು ಗಣರಾಜ್ಯೋತ್ಸವದ ಬಗ್ಗೆ ಮಾತನಾಡಿದರು. ಜ್ಞಾನ ದೀಪ ಶಿಕ್ಷಕಿ ಕುಸುಮ.ಸಿ.ಎಚ್ ವಂದಿಸಿದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅತಿಥಿ ಶಿಕ್ಷಕಿ ಕಾವ್ಯಶ್ರೀ ನಡೆಸಿ ಕೊಟ್ಟರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಪಾಲ್ಗೊಂಡರು.

LEAVE A REPLY

Please enter your comment!
Please enter your name here