ಇರ್ದೆ ಉಪ್ಪಳಿಗೆ ಪ್ರಾಥಮಿಕ ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ

0

ನಿಡ್ಪಳ್ಳಿ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ದೆ ಉಪ್ಪಳಿಗೆ  ಇಲ್ಲಿ 75ನೇ ಗಣರಾಜ್ಯ ದಿನಾಚರಣೆ ಆಚರಿಸಲಾಯಿತು.ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಲೋಕನಾಥ ಆಚಾರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶಾಲಾ ಮುಖ್ಯಗುರು ಲಿಂಗಮ್ಮ  ಸ್ವಾಗತಿಸಿ ಗಣರಾಜ್ಯ ದಿನದ ಮಹತ್ವ ತಿಳಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಯಶೋದಾ ಹಾಗೂ ಸದಸ್ಯರು ಮಕ್ಕಳ ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಹಶಿಕ್ಷಕಿ ಪಾರ್ವತಿ ವಂದಿಸಿದರು.ಎಸ್.ಡಿ.ಎಂ.ಸಿ ಸದಸ್ಯ ಆನಂದ ಆರಂಬ್ಯ ಸಿಹಿ ತಿಂಡಿ ಪ್ರಾಯೋಜಕತ್ವ ವಹಿಸಿದ್ದರು.ಧ್ವಜಾರೋಹಣ ಕಾರ್ಯಕ್ರಮದ ನಂತರ ಪೆನ್ಸಿಲ್ ಬಾಕ್ಸ್ ಚಲನ ಚಿತ್ರ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here