ನೇರ್ಲ-ಇಚ್ಲಂಪಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಪುತ್ತೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ-ಇಚ್ಲಂಪಾಡಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡೆಯಿತು. ಧ್ವಜಾರೋಹಣವನ್ನು SDMC ಅಧ್ಯಕ್ಷ ವಸಂತ ಬಿಜೇರು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ SDMC ಉಪಾಧ್ಯಕ್ಷೆ ನಂದಕುಮಾರಿ, ಕೌಕ್ರಾಡಿ ಪಂಚಾಯತಿನ ಸದಸ್ಯೆ ಡೈಸಿ ವರ್ಗೀಸ್, ಶಾಲಾ ಮುಖ್ಯೋಪಾಧ್ಯಾಯನಿ ಜಯಶ್ರೀ ಎಸ್, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು , ಪೋಷಕರು ಮತ್ತು ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳು ಗಣರಾಜ್ಯೋತ್ಸವದ ಕುರಿತಾಗಿ ಭಾಷಣವನ್ನು ಮಾಡಿದರು. ಹಿರಿಯ ಶಿಕ್ಷಕಿ ಜಯ.ಕೆ ಸ್ವಾಗತಿಸಿ, ಶಿಕ್ಷಕ ಗಿರೀಶ್ ಕಾರ್ಯಕ್ರಮ ನಿರೂಪಿಸಿ ,ವಂದಿಸಿದರು.

LEAVE A REPLY

Please enter your comment!
Please enter your name here