ಇರ್ದೆ ಉಪ್ಪಳಿಗೆ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

0

ಪುತ್ತೂರು: ಇರ್ದೆ ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ ಶಾಲಾ ಅಭಿವೃದ್ಧಿಯ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ದೇಶದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳಾದ ಪುತ್ತು ಚೆಲ್ಯಡ್ಕ, ಜತ್ತಪ್ಪ ಗೌಡ ಗುಮಟಗದ್ದೆ, ಚನಿಯಪ್ಪ ನಾಯ್ಕ ಅಜಲಡ್ಕ, ಶ್ರೀಧರ ಪೂಜಾರಿ ದರ್ಬೆತಡ್ಕ, ಕೃಷ್ಣಪ್ಪ ನಾಯ್ಕ ಕೈಕಾರ ಉಪಸ್ಥಿತರಿದ್ದರು. ಸಮಾಜ ಶಿಕ್ಷಕಿ, ಸಹ ಶಿಕ್ಷಕ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ಯಾಮಲ ಎಂ ರವರು ಗಣರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಅನ್ನಮ್ಮ ಪಿ ಎಸ್. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಮಕೃಷ್ಣ ಪಡುಮಲೆ ವಂದಿಸಿದರು. ಶಿಕ್ಷಕರಾದ ರಾಮಚಂದ್ರ ಕೆ , ಸವಿತಾ ಕೆ., ವಿದ್ಯಾಲಕ್ಷ್ಮಿ , ಜಯಲತಾ ಕೆ, ಆಶಾಲತಾ ಸಹಕರಿಸಿದರು. ಪುತ್ತು ಚೆಲ್ಯಡ್ಕ ಅವರು ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು.

LEAVE A REPLY

Please enter your comment!
Please enter your name here