ಫೆ.1:ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ

0

ಪುತ್ತೂರು: ಪತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಪುತ್ತೂರು ತಾಲೂಕು ಮಡಿವಾಳ ಸಂಘ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ದಿನಾಚರಣೆ ಫೆ.1 ರಂದು ಪೂರ್ವಾಹ್ನ ಗಂಟೆ 10.30 ಕ್ಕೆ ಪುತ್ತೂರು ತಾಲೂಕು ಆಡಳಿತ ಸೌಧ, ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.


ಪುತ್ತೂರು ಮಾನ್ಯ ಸಹಾಯಕ ಆಯುಕ್ತ ಜುಬಿನ್‌ ಮೊಹಪಾತ್ರ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಪುತ್ತೂರು ವಿಧಾನಸಭಾ ಕ್ಷೇತ್ರದ ಅಶೋಕ್‌ ಕುಮಾರ್‌ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಉಪವಿಭಾಗ ಮಾನ್ಯ ಪೊಲೀಸ್‌ ಉಪಾಧೀಕ್ಷಕ ಅರುಣ್‌ ನಾಗೇಗೌಡ, ಗೌರವ ಉಪಸ್ಥಿತಿ ಪುತ್ತೂರು ಪುತ್ತೂರು ತಾಲೂಕು ಮಡಿವಾಳ ಅಧ್ಯಕ್ಷ ಪಿ ಎನ್‌ ಸುಭಾಶ್ಚಂದ್ರ ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here