ಪುಣಚ ಆಜೇರು ಹಿರಿಯ ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ

0

ಪುಣಚ: ಪುಣಚ ಆಜೇರು ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ದಿನವನ್ನು ಜ.26 ರಂದು ಆಚರಿಸಲಾಯಿತು. ನಿವೃತ್ತ ಶಿಕ್ಷಕಿ ಬಿ.ವಿ ಸೀತಾಲಕ್ಷ್ಮಿ ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಧ್ವಜಕಟ್ಟೆಯನ್ನು ಉದ್ಘಾಟಿಸಿ, ಧ್ವಜ ಹಾರಿಸಿ ಶುಭ ನುಡಿದರು.


ಅತಿಥಿಯಾಗಿ ಶ್ರೀಪತಿ ನಾಯಕ್ ಆಜೇರು ಭಾಗವಹಿಸಿದ್ದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವೆಂಕಟ್ರಮಣ ಪುಣಚ ವಹಿಸಿದ್ದರು. ಶಾಲಾ ವಿಧ್ಯಾರ್ಥಿಗಳು ಪ್ರಾರ್ಥಿಸಿದರು. ಅತಿಥಿ ಶಿಕ್ಷಕಿ ಸುಮತಿ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿ ಭವ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಮಕ್ಕಳು, ಪೋಷಕರು, ಅಡುಗೆ ಸಿಬ್ಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here