ಪೇರಲ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

0

ನಿಡ್ಪಳ್ಳಿ: ಇರ್ದೆ ಪೇರಲ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಜ.20ರಂದು ತುಳಸಿ ರವಿಪ್ರಕಾಶ್ ಬಾಳೆಹಿತ್ಲು ಇವರ ಅಧ್ಯಕ್ಷತೆಯಲ್ಲಿ ಬಾಲಮೇಳ ನಡೆಯಿತು. ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ರೈ ಪಂಜೊಟ್ಟು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ರೈ ಚೆಲ್ಯಡ್ಕ , ಚಂದ್ರಶೇಖರ ರೈ ಬಾಲ್ಯೊಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಶು ಅಭಿವೃದ್ಧಿ ಇಲಾಖೆಯ ಪಾಣಾಜೆ ವಲಯ ಪ್ರಭಾರ ಮೆಲ್ವೀಚಾರಕಿ ನಾಗರತ್ನ ಮಾಹಿತಿ ನೀಡಿದರು.ಅಂಗನವಾಡಿ ಎದುರು ಅಳವಡಿಸಿದ ಶೀಟ್‌ ಮಾಡನ್ನು  ಉದಯಕುಮಾರ್ ಅರಂಬ್ಯ ಉದ್ಘಾಟಿಸಿದರು.ಇರ್ದೆ ಕ್ಲಸ್ಟರ್ ಸಿ.ಅರ್.ಪಿ ಬಾಲಕೃಷ್ಣ. ಕೆ, ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಮಿತ್ತಡ್ಕ ಅಂಗನವಾಡಿ ಕೇಂದ್ರದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದರು. ಮಕ್ಕಳಿಗೆ, ಪೋಷಕರಿಗೆ ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಅಂಗನವಾಡಿ ಪುಟಾಣಿಗಳು ಪ್ರಾರ್ಥಿಸಿ, ಅಂಗನವಾಡಿ ಕಾರ್ಯಕರ್ತೆ ನೀತಾ.ಪಿ ಸ್ವಾಗತಿಸಿ, ಪ್ರಶಾಂತಿ ಕುಮಾರಿ ವಂದಿಸಿದರು. ಕಕ್ಕೂರು ಅಂಗನವಾಡಿ ಕಾರ್ಯಕರ್ತೆ ಶ್ಯಾಮಲ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ಲಲಿತ ಸಹಕರಿಸಿದರು.

LEAVE A REPLY

Please enter your comment!
Please enter your name here