ಪಾಣಾಜೆ: ಜಾತ್ರೋತ್ಸವಕ್ಕೆ ಶಾಸಕ ಅಶೋಕ್ ಕುಮಾರ್ ರೈ, ಪದ್ಮರಾಜ್ ಆರ್. ಭೇಟಿ

0

ಪಾಣಾಜೆ: ಇಲ್ಲಿನ ಶ್ರೀ ಪೂಮಾಣಿ ಕಿನ್ನಿಮಾಣಿ, ಶ್ರೀ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದ ವೇಳೆ ಜ.28ರಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರೂ ಆದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಹಾಗೂ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ರವರು ಆಗಮಿಸಿ ಶ್ರೀದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರದ ಶ್ರೀಕೃಷ್ಣ ಬೋಳಿಲ್ಲಾಯ ಕಡಮಾಜೆ ಅವರು ಶಾಲು ಹಾಕಿ ಗೌರವಿಸಿದರು. ಜೀರ್ಣೋದ್ಧಾರ ಸಮಿತಿಯ ಪ್ರಧಾನ ಸಂಚಾಲಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here