ದೈಪಿಲ ಕ್ಷೇತ್ರದ ನೇಮೋತ್ಸವಕ್ಕೆ ಗೊನೆ ಮುಹೂರ್ತ

0

ಕಾಣಿಯೂರು: ಶ್ರೀ ಕ್ಷೇತ್ರ ದೈಪಿಲ ಗ್ರಾಮ ದೈವ ಶಿರಾಡಿ ರಾಜನ್ ಮತ್ತು ಚಕ್ರವರ್ತಿ ಕೊಡಮಣಿತ್ತಾಯ ದೈವಗಳ ನೇಮೋತ್ಸವವು ಫೆ 7,8ರಂದು ನಡೆಯಲಿದ್ದು, ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ಫೆ 1ರಂದು ಜರಗಿತು.

ಈ ಸಂದರ್ಭದಲ್ಲಿ ಚಂದ್ರಕಲಾ ಜಯರಾಮ್ ಅರುವಗುತ್ತು, ಅರುವಗುತ್ತಿನ ಯಜಮಾನರಾದ ಪ್ರದೀಪ್ ಆರ್.ಗೌಡ, ಕುಂಬ್ಲಾಡಿ ಶ್ರೀ ಕುಕ್ಕೇನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೇಮಣ್ಣ ಗೌಡ ಅಂಬುಲ,ಚಕ್ರವರ್ತಿ ಕೊಡಮಣಿತ್ತಾಯ ದೈವದ ಪರಿಚಾರಕ ಜಯಾನಂದ ಕೊಪ್ಪ, ಶಿರಾಡಿ ರಾಜನ್ ದೈವದ ಪರಿಚಾರಕ ಧರ್ಮಪಾಲ ಅಂಬುಲ ಮತ್ತು ನಾಲ್ಕು ಮನೆಯವರು, 14 ವರ್ಗದವರು ಹಾಗೂ ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here