ಕಬಕ ಗ್ರಾ.ಪಂ.ನಲ್ಲಿ ವಿಕಲಚೇತನರ ಗ್ರಾಮಸಭೆ

0

ಪುತ್ತೂರು: ಕಬಕ ಗ್ರಾಮಪಂಚಾಯತ್‌ನಲ್ಲಿ ವಿಕಲಚೇತನರ ವಿಶೇಷ ಗ್ರಾಮಸಭೆ ಕಬಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಗೀತಾ, ಅಭಿವೃದ್ಧಿ ಅಧಿಕಾರಿ ಆಶಾ ಇ., ಕಾರ್ಯದರ್ಶಿ ಸುರೇಶ್ ಕೆ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಪುತ್ತೂರು ತಾಲೂಕು ಪಂಚಾಯತ್ ಬಹುಮಟ್ಟದ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್ ವಿಕಲಚೇತನರ ಇಲಾಖೆ ಯೋಜನೆಗಳ ಹಾಗೂ ಎಂಡೋಪೀಡಿತರ ಅರೋಗ್ಯ ಕಾರ್ಯಕ್ರಮದ ಮಾಹಿತಿ ನೀಡಿದರು.

ಕುಡಿಪಾಡಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಆಚಾರ್ಯ, ವಿಕಲಚೇತನರು, ವಿಕಲಚೇತನರ ಆರೈಕೆದಾರರು, ಎಂಡೋಪೀಡಿತರು, ಗ್ರಾಮ ಪಂಚಾಯತ್ ಸದಸ್ಯರು, ಆಶಾಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು/ಸಮುದಾಯದ ಅರೋಗ್ಯ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಕಬಕ ಗ್ರಾಮೀಣ ಪುನರ್‌ವಸತಿ ಕಾರ್ಯಕರ್ತೆ ಶೀಲಾವತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here