ರಾಜ್ಯ ಮಟ್ಟದ ಟೈಲರ್ ವೃತ್ತಿ ಬಾಂಧವರ ಬೃಹತ್ ಸಮಾವೇಶದಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಪದಾಧಿಕಾರಿಗಳು ಭಾಗಿ

0

ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ವತಿಯಿಂದ ಬೆಂಗಳೂರಿನ ಜಯನಗರದ ಐದನೇ ಬ್ಲಾಕ್ ಶಾಲಿನಿ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಟೈಲರ್ ವೃತ್ತಿ ಬಾಂಧವರ ಬೃಹತ್ ಸಮಾವೇಶ ಮತ್ತು ರಜತ ಮಹೋತ್ಸವದ ಸಂಭ್ರಮ ಕಾರ್ಯಕ್ರಮದಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಶನ್ ಪುತ್ತೂರು ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಪುತ್ತೂರು ಕ್ಷೇತ್ರದ 9 ವಲಯಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷೆ ಉಮಾ ಯು ನಾಕ್, ಪ್ರಧಾನ ಕಾರ್ಯದರ್ಶಿ ಚಿತ್ರಾ ಬಿ.ಸಿ, ಕೋಶಾಧಿಕಾರಿ ಪರಮೇಶ್ವರ ಕಾಣಿಯೂರು, ಪುತ್ತೂರು ಕ್ಷೇತ್ರ ಸಮಿತಿ ಉಪಾಧ್ಯಕ್ಷ ಯಶೋಧರ ಜೈನ್ ದರ್ಬೆ, ಪುತ್ತೂರು ನಗರ ವಲಯ ಅಧ್ಯಕ್ಷ ದಿನೇಶ್ ಸಂಪ್ಯ, ರಾಜ್ಯ ಸಮಿತಿ ಲೆಕ್ಕ ಪರಿಶೋಧಕ ರಘುನಾಥ್ ಬಿ ಪುತ್ತೂರು, ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ರಜತ ಮಹೋತ್ಸವ ಪ್ರಚಾರ ಸಮಿತಿ ಸದಸ್ಯ ಜಯಂತ್ ಉರ್ಲಾಂಡಿ, ಜಿಲ್ಲಾ ಸಮಿತಿ ಸದಸ್ಯರಾದ ಶಂಭು ಬಲ್ಯಾಯ ಮುಂಡೋಡಿ, ಸುರೇಖಾ ನಿಡ್ಪಳ್ಳಿ, ನಿಕಟಪೂರ್ವ ಕ್ಷೇತ್ರ ಅಧ್ಯಕ್ಷ ಜಯರಾಮ ಬಿ.ಎನ್ ಮತ್ತಿತರರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here