ಉಪ್ಪಿನಂಗಡಿ: ಮೋದಿ ಮತ್ತೊಮ್ಮೆ’ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

0

ಉಪ್ಪಿನಂಗಡಿ: ಬಿಜೆಪಿಯ ವತಿಯಿಂದ ನಡೆಯುತ್ತಿರುವ ಮೋದಿ ಮತ್ತೊಮ್ಮೆ’ ಗೋಡೆ ಬರಹ ಅಭಿಯಾನಕ್ಕೆ ಉಪ್ಪಿನಂಗಡಿಯಲ್ಲಿ ಫೆ.4ರಂದು ಚಾಲನೆ ನೀಡಲಾಯಿತು.
ಈ ಸಂದರ್ಭ ಅಭಿಯಾನದ ಬಿಜೆಪಿ ಗ್ರಾಮಾಂತರ ಮಂಡಲದ ಸಂಚಾಲಕ ಸುರೇಶ್ ಅತ್ರೆಮಜಲು, ಒಬಿಸಿ ಮೋರ್ಚಾದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು, ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷೆ ಉಷಾ ಚಂದ್ರ ಮುಳಿಯ, ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಧನಂಜಯ ಕುಮಾರ್, ಶಕ್ತಿ ಕೇಂದ್ರದ ಸಹ ಸಂಚಾಲಕ ಪ್ರಸಾದ್ ಬಂಡಾರಿ, ಯುವ ಮೋರ್ಚಾದ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಆದೇಶ್ ಶೆಟ್ಟಿ, ವಿಎಚ್‌ಪಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಸುದರ್ಶನ್, ಪ್ರಮುಖರಾದ ಸುಂದರ ಗೌಡ, ಸಚಿನ್, ಜಯಗೋವಿಂದ ಶರ್ಮ, ಆದರ್ಶ ಕಜೆಕ್ಕಾರು ಮತ್ತಿತರರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here