ಕೊನೆಮಜಲುಗುತ್ತು: ದೈವಗಳ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ

0

ರಾಮಕುಂಜ: ಕೊಯಿಲ ಗ್ರಾಮದ ಕೊನೆಮಜಲುಗುತ್ತು ಶ್ರೀ ದೇವಿ ಉಳ್ಳಾಲ್ತಿ ಉಳ್ಳಾಕ್ಲು ಹಾಗೂ ಸಹ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ.3ರಂದು ದೈವಗಳ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.


ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆ ಹಾಗೂ ವೇದಮೂರ್ತಿ ವೆಂಕಟ್ರಮಣ ಕುದ್ರೆತ್ತಾಯರ ಉಪಸ್ಥಿತಿಯಲ್ಲಿ ಬೆಳಿಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿಹೋಮ, ನವಕಲಶ ತಂಬಿಲ, ಆಶ್ಲೇಷ ಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ದಯಾನಂದ ರಾವ್ ಪಾಣಿಗ, ಕಾರ್ಯದರ್ಶಿ ಕೆ.ಸಂಜೀವ ಗೌಡ ಕೊನೆಮಜಲು, ಸದಸ್ಯರಾದ ವಿನೋದರ ಮಾಳ, ಬಾಲಕೃಷ್ಣ ಶೆಟ್ಟಿ, ರಾಮಣ್ಣ ಗೌಡ ಪಾಣಿಗ, ವಿಶ್ವನಾಥ ಗೌಡ ಕೊನೆಮಜಲು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here