ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಭೇಟಿ

0

ಪುತ್ತೂರು: ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿರವರು ಫೆ.4ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ, ಹಿರಿಯ ವೈದ್ಯರಾದ ಡಾ.ಯು ಶ್ರೀಪತಿ ರಾವ್, ಮಹಿಳಾ ವೈದ್ಯೆ ಡಾ.ಸುಧಾ ಎಸ್.ರಾವ್ ರವರು ಶ್ರೀಗಳನ್ನು ಬರಮಾಡಿಕೊಂಡು ಅವರ ಪಾದಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ. ಯು.ಶ್ರೀಪತಿ ರಾವ್ ರವರ ಪುತ್ರಿ ಥೈರೋಯ್ಡ್ ಸ್ಪೆಷಾಲಿಸ್ಟ್ ಸ್ಮಿತಾ ಎಸ್ ರಾವ್, ಮೊಮ್ಮಗಳು ಆಸ್ಥಾ, ಅದಮಾರು ಮಠದ ಪಿ. ಆರ್. ಒ. ಗೋವಿದರಾಜ್, ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ ಎರ್ಕಡಿತ್ತಾಯ, ಎಲ್.ಐ. ಸಿ ಡೆವಲಪ್ ಮೆಂಟ್ ಆಫೀಸರ್ ಪಿ.ಎಸ್ವಿ ಮೂರ್ತಿ,
ಕೆಮ್ಮಾಯಿ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರರಾದ ಶ್ರೀಧರ ಬೈಪಡಿತ್ತಾಯ, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರೀತಾ ಹೆಗ್ಡೆ, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ್ ಕುಮಾರ್ ರೈ ಸೇರಿದಂತೆ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here