ಸವಣೂರು ಶ್ರೀ ವಿಷ್ಣು ಮೂರ್ತಿ ದೇವಾಲಯದ ಜಾತ್ರೋತ್ಸವ- ಹಸಿರು ಹೊರೆ ಕಾಣಿಕೆ ಸಮರ್ಪಣೆ

0

ಪುತ್ತೂರು: ಫೆ.7 ಮತ್ತು 8ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಹಸಿರು ಹೊರೆ ಕಾಣಿಕೆ ಸಮರ್ಪಣೆಯು ಫೆ.6ರಂದು ಸವಣೂರು ಶ್ರೀ ಪದ್ಮಾವತೀ ದೇವಿಯ ಬಸದಿ ವಠಾರದಿಂದ ಹೊರಟು ಸವಣೂರು ಮುಖ್ಯ ರಸ್ತೆಯಾಗಿ ಪರಣೆ ಮಾರ್ಗವಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲುಪಿತು.
ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿಯವರು ತೆಂಗಿನಕಾಯಿ ಒಡೆಯುವ ಮೂಲಕ ಹಸಿರುಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆಗೈದರು. ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಅರ್ಚಕ ನಾರಾಯಣ ಬಡೆಕಿಲ್ಲಾಯರವರು ದೇವಾಲಯದ ವಠಾರದಲ್ಲಿ ಹಸಿರುಹೊರೆ ಕಾಣಿಕೆಗೆ ಆರತಿ ಬೆಳಗಿ, ಸ್ವಾಗತಿಸಿದರು. ಸವಣೂರಿನ ಹಿರಿಯ ಉದ್ಯಮಿ ಸವಣೂರು ಎನ್.ಸುಂದರ ರೈ, ಜಾತ್ರೋತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಕಾರ್‍ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಸವಣೂರು ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆ, ನಿಕಟಪೂರ್ವಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಕಾರ್‍ಯದರ್ಶಿ ರಾಘವ ಗೌಡ ಸವಣೂರು, ಉಪಾಧ್ಯಕ್ಷ ಗಂಗಾಧರ್ ಸುಣ್ಣಾಜೆ, ಪುರಂದರ ಬಾರಿಕೆ, ಸತೀಶ್ ಬಲ್ಯಾಯ ಕನಡಕುಮೇರು, ನಾರಾಯಣ ಪೂಜಾರಿ ಕೆಯ್ಯೂರು, ಜಯರಾಮ ರೈ ಮೂಡಂಬೈಲು ಕನಡಕುಮೇರು, ಜಯಪ್ಪ ಗೌಡ ಸವಣೂರು, ಭಾಸ್ಕರ ಗೌಡ ಅಡೀಲು, ರುಕ್ಮಯ್ಯ ಗೌಡ ಹೊಸವೊಕ್ಲು, ರಾಮಚಂದ್ರ ಕೊಡಂಕೀರಿ, ನಾರಾಯಣ ಪೂಜಾರಿ ಮಾಲೆತ್ತಾರು, ಅಂಗಾರ ಸವಣೂರು, ಕಿರಣ್ ಕೋಡಿಬೈಲು, ವೆಂಕಪ್ಪ ಗೌಡ ಮಾಲೆತ್ತಾರು, ಪ್ರವೀಣ್ ಬಾರಿಕೆ ಸಹಿತ ನೂರಾರು ಮಂದಿ ಭಾಗವಹಿಸಿದರು.

ಫೆ.7-8 ಜಾತ್ರೋತ್ಸವ
ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರೋತ್ಸವ ಫೆ.7 ಮತ್ತು 8ರಂದು ಜರಗಲಿದೆ. ಫೆ.7ರಂದು ಬೆಳಿಗ್ಗೆ ತಂತ್ರಿಗಳ ಆಗಮನದ ಬಳಿಕ ವಿವಿಧ ವೈದಿಕ ಕಾರ್‍ಯಕ್ರಮಗಳು, ಮಧ್ಯಾಹ್ನನ ಪ್ರತಿಷ್ಠಾ ದಿನದ ಪೂಜೆಯ ಬಳಿಕ ಸಹಕಾರ ರತ್ನ ಸವಣೂರು ಕೆ.ಸೀತಾರಾಮ ರೈಯವರ ಸೇವಾರ್ಥ ಅನ್ನಸಂತರ್ಪಣೆ ನಡೆಯಲಿದೆ ಬಳಿಕ ರಾತ್ರಿ ರಂಗಪೂಜೆ , ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ ಸುಡುಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿಯ ಅನ್ನದಾನ ಸೇವಾಕರ್ತರಾಗಿ ಗ್ರಾಮಸ್ಥರು ಮತ್ತು ಪರವೂರದಾನಿಗಳು ಸಹಕರಿಸಲಿದ್ದಾರೆ. ಫೆ.8ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮದ್ಯಾಹ್ನ ಅನ್ನಸಂತರ್ಪಣೆಯು ಸವಣೂರುಗುತ್ತು ಕುಟುಂಬಸ್ಥರ ಸೇವಾರ್ಥ ನಡೆಯಲಿದೆ. ರಾತ್ರಿ 8ರಿಂದ ಶ್ರೀ ಉಳ್ಳಾಲ್ತಿ ದೈವದ ನೇಮೋತ್ಸವ ನಡೆದ ಬಳಿಕ ಅದೇ ದಿನ ಶ್ರೀಮತಿ ವಿಸ್ಮಿತಾ ಸಾಜನ್ ಹೆಗ್ಡೆರವರ ಸೇವಾರ್ಥ ಶ್ರೀ ಉಳ್ಳಾಲ್ತಿ ದೈವದ ಹರಿಕೆ ನೇಮೋತ್ಸವ ನಡೆಯಲಿದೆ. ರಾತ್ರಿಯ ಅನ್ನಸಂತರ್ಪಣೆಯು ಶ್ರೀಮತಿ ಕವಿತಾ ವಿ.ಶೆಟ್ಟಿ ಮತ್ತು ಕು.ದೇಷ್ನಾ ಶೆಟ್ಟಿ ಬೆಂಗಳೂರುರವರ ಸೇವಾರ್ಥ ನಡೆಯಲಿದೆ ಎಂದು ದೇವಾಲಯದ ಆಡಳಿತದಾರ ಸವಣೂರುಗುತ್ತು ಡಾ.ರತ್ನಾಕರ ಶೆಟ್ಟಿ, ಆಡಳಿತ ಸಮಿತಿಯ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಸೀತಾರಾಮ ರೈ, ಕಾರ್‍ಯದರ್ಶಿ ಬೆಳಿಯಪ್ಪ ಗೌಡ ಚೌಕಿಮಠ, ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯ ಹಾಗೂ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ್ ಸುಣ್ಣಾಜೆರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here