ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ-ನಿರ್ದೇಶಕರ ಅವಿರೋಧ ಆಯ್ಕೆ

0

ಅಧ್ಯಕ್ಷ: ಕೇಶವ ಗೌಡ ಅಲೆಕ್ಕಿ, ಉಪಾಧ್ಯಕ್ಷ: ಅಣ್ಣಿ ನಾಯ್ಕ


ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಎಲ್ಲಾ 13 ನಿರ್ದೇಶಕರ ಅವಿರೋಧ ಆಯ್ಕೆ ನಡೆದಿದೆ. ಸಂಘದ ಅಧ್ಯಕ್ಷರಾಗಿ ಕೇಶವ ಗೌಡ ಅಲೆಕ್ಕಿ ಹಾಗೂ ಉಪಾಧ್ಯಕ್ಷರಾಗಿ ಅಣ್ಣಿ ನಾಯ್ಕ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಸಾಮಾನ್ಯ ಸ್ಥಾನದಿಂದ ಕೇಶವ ಗೌಡ ಅಲೆಕ್ಕಿ, ರಾಧಾಕೃಷ್ಣ ಕೆರ್ನಡ್ಕ, ಮೋಹನ್‌ದಾಸ್ ಬಿ., ಆನಂದ ಶೆಟ್ಟಿ ಕಂಚಿನಡ್ಕ, ವಿ.ಯಂ.ಮ್ಯಾಥ್ಯು, ಸಜಿ ಪಿ.ಜಿ., ಕೆ.ಮಹಾವೀರ ಜೈನ್, ಪರಿಶಿಷ್ಠ ಜಾತಿ ಮೀಸಲು ಸ್ಥಾನದಿಂದ ಜೋಗಿ ಮುಗೇರ, ಪರಿಶಿಷ್ಠ ಪಂಗಡ ಮೀಸಲು ಸ್ಥಾನದಿಂದ ಅಣ್ಣಿ ನಾಯ್ಕ, ಹಿಂದುಳಿದ ಪ್ರವರ್ಗ ಎ ಮೀಸಲು ಸ್ಥಾನದಿಂದ ವರ್ಗೀಸ್ ಅಬ್ರಹಾಂ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನದಿಂದ ಶಾಂತರಾಮ ಕುಡಾಲ, ಮಹಿಳಾ ಮೀಸಲು ಸ್ಥಾನದಿಂದ ವಿಜಯ ಹಾಗೂ ಕಮಲಾಕ್ಷಿಯವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್.ಅವರು ಚುನಾವಣಾಧಿಕಾರಿಯಾಗಿದ್ದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ:
ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆಯು ಫೆ.3ರಂದು ಸಂಘದ ಕೇಂದ್ರ ಕಚೇರಿಯಲ್ಲಿ ಚುನಾವಣಾಧಿಕಾರಿಯಾದ ಶೋಭಾ ಎನ್.ಎಸ್.ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕೇಶವ ಗೌಡ ಅಲೆಕ್ಕಿ ಹಾಗೂ ಉಪಾಧ್ಯಕ್ಷರಾಗಿ ಅಣ್ಣಿ ನಾಯ್ಕ ಅವರು ಅವಿರೋಧವಾಗಿ ಆಯ್ಕೆಗೊಂಡರು. ಸಂಘದ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here