ಶಾಂತಿನಗರ ಶಾಲಾ ಶೌಚಾಲಯ ಉದ್ಘಾಟನೆ

0

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ಶಿಕ್ಷಣ ಇಲಾಖೆಯ ಒಟ್ಟು 5.20 ಲಕ್ಷ ರೂ ಅನುದಾನದಲ್ಲಿ ನಿರ್ಮಾಣವಾಗಿರುವ ನೂತನ ಶೌಚಾಲಯದ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಿ ಶುಭ ಹಾರೈಸಿದರು.

ಶಾಲಾ ಮುಖ್ಯಗುರು ಜೆಸಿಂತಾ ಆನ್ಸಿ ಮಿನೇಜಸ್ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಮುನೀರ್ ಶಾಂತಿನಗರ ಅವರು ಶಾಲೆಗೆ ಬರುವ ರಸ್ತೆಗೆ ಕಾಂಕ್ರಿಟೀಕರಣ ಹಾಗೂ ಶಾಲಾ ಕಟ್ಟಡ ಮೇಲ್ಚಾವಣಿ ದುರಸ್ತಿಗೆ ಅನುದಾನ ಒದಗಿಸುವಂತೆ ಈ ವೇಳೆ ಶಾಸಕ ಅಶೋಕ್ ರೈಯವರಿಗೆ ಮನವಿ ಸಲ್ಲಿಸಿದರು. ಶಾಲಾ ವಿದ್ಯಾರ್ಥಿಗಳು ತಮಗೆ ಜೋಕಾಲಿ ಹಾಗೂ ಜಾರುಬಂಡಿಯ ವ್ಯವಸ್ಥೆ ಮಾಡಿಕೊಡಿ ಎಂದು ಶಾಸಕರಿಗೆ ಮನವಿ ಅರ್ಪಿಸಿದರು. ಮನವಿ ಸ್ವೀಕರಿಸಿದ ಶಾಸಕರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. ಸಹಶಿಕ್ಷಕರಾದ ತಿಮ್ಮಕ್ಕ ಪಿ, ದಿವ್ಯಾ, ರಕ್ಷಿತಾ ಕೆ.ವಿ, ಕೌಸರ್‌ಬಾನು, ಎಸ್‌ಡಿಎಂಸಿ ಉಪಾಧ್ಯಕ್ಷ ಸಲೀಂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here