ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕಿ ಜ್ಞಾನೇಶ್ವರಿ ಬರೆಪ್ಪಾಡಿಯವರಿಗೆ ಸನ್ಮಾನ

0

ಕಾಣಿಯೂರು: ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘ ಕಾಣಿಯೂರು ಶಾಖಾ ವತಿಯಿಂದ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಾರಾನಾಥ ಕಾಯರ್ಗ ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಜ್ಞಾನೇಶ್ವರಿ ಬರೆಪ್ಪಾಡಿ ಅವರನ್ನು ಕಾಣಿಯೂರು ಸಂಘದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ನ್ಯಾಯವಾದಿಯಾಗಿರುವ ಚಿದಾನಂದ ಬೈಲಾಡಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಯು. ಪಿ ರಾಮಕೃಷ್ಣ ಗೌಡ, ನಿರ್ದೇಶಕರಾದ ರಾಮಕೃಷ್ಣ ಗೌಡ ಕೆ, ಪ್ರವೀಣ್ ಕುಂಟ್ಯಾನ, ಸಲಹಾ ಸಮಿತಿ ಸದಸ್ಯರಾದ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಎಂ.ಎನ್ ಗೌಡ, ಚಂದ್ರಶೇಖರ್ ಗೌಡ ಬರೆಪ್ಪಾಡಿ, ನಾಗೇಶ್ ಕೆಡೆಂಜಿ, ವಿಶ್ವನಾಥ ಗೌಡ ಅಂಬುಲ, ಶೇಷಪ್ಪ ಗೌಡ ಅಬೀರ, ಶೇಷಪ್ಪ ಗೌಡ ಐ, ಶೂರಪ್ಪ ಗೌಡ, ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸುಧಾಕರ್ ಕೆ ಹಾಗೂ ಶಾಖಾ ಪ್ರಬಂಧಕರು, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here