ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಮುಂಡೂರಿನ ಭುವನೇಶ್ವರಿಯವರಿಗೆ ಹಲವು ಪ್ರಶಸ್ತಿ-ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆ 

0

ಪುತ್ತೂರು: ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಮುಂಡೂರು ಗ್ರಾಮದ ಬರೆಕೋಲಾಡಿ ಹರೀಶ್ ನಾಯ್ಕ ಅವರ ಪತ್ನಿ ಭುವನೇಶ್ವರಿ ಎ ಇವರು 4×400 ರಿಲೇಯಲ್ಲಿ ಪ್ರಥಮ, 200 ಮೀ ಹರ್ಡಲ್ಸ್,  5 ಕಿ.ಮೀ ನಡಿಗೆ ಮತ್ತು 4×100 ಮೀ ರಿಲೇಯಲ್ಲಿ ದ್ವಿತೀಯ , ಉದ್ದಜಿಗಿತದಲ್ಲಿ ತೃತೀಯ ಸ್ಥಾನ ಗಳಿಸಿ, ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಇವರು ಪುತ್ತೂರು ತಾಲೂಕು ಏಕತ್ತಡ್ಕ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯ ಕಾವು ಶಾಖೆಯಲ್ಲಿ ಉದ್ಯೋಗಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here