ರಾಷ್ಟ್ರ ಮಟ್ಟದ ಕ್ರೀಡಾಕೂಟ – ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ದಿನೇಶ್ ಆಚಾರ್ಯ

0

ಪುತ್ತೂರು : ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆಬ್ರವರಿ 2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಶೆಟ್ಟಿಮಜಲು ದಿನೇಶ್ ಆಚಾರ್ಯ (ದಿ.ನಾರಾಯಣ ಆಚಾರ್ಯ ಮತ್ತು ವಸಂತಿ ನಾರಾಯಣ ಆಚಾರ್ಯ ದಂಪತಿ ಪುತ್ರ) ಇವರು 4×400 ರಿಲೇಯಲ್ಲಿ ದ್ವಿತೀಯ ಹಾಗೂ 5ಕಿ.ಮೀ ನಡಿಗೆಯಲ್ಲಿ ತೃತೀಯ ಸ್ಥಾನ ಗಳಿಸಿ, ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಪ್ರಸ್ತುತ ಬೊಳ್ವಾರು ಪ್ರಗತಿ ಆಸ್ಪತ್ತೆಯಲ್ಲಿ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಪಣೆ ಸರಕಾರಿ ಪ್ರೌಢಶಾಲೆ , ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here