ಪುತ್ತೂರಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಅರಿವು

0

ಪುತ್ತೂರು: ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜ.26ರಿಂದ ರಾಜ್ಯದ ಪ್ರತೀ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಫೆ.12ರಂದು ಪುತ್ತೂರಿಗೆ ಆಗಮಿಸುವ ಸಂವಿಧಾನ ಜಾಗೃತಿ ಸ್ಥಬ್ದ ಚಿತ್ರದ ಅಂಗವಾಗಿ ಫೆ.7ರಂದು ಪುತ್ತೂರಿನಲ್ಲಿ ಜಾಗೃತಿಗಾಗಿ ಸೈಕಲ್, ದ್ವಿಚಕ್ರ ವಾಹನ ಜಾಥಾ ನಡೆಯಿತು.
ಪುತ್ತೂರು ಬೊಳುವಾರಿನಿಂದ ಕಿಲ್ಲೆ ಮೈದಾನದ ತನಕ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳು ಸೈಕಲ್‌ನಲ್ಲಿ ಮತ್ತು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದ ಮೂಲಕ ತೆರಳಿ ಸಂವಿಧಾನ ಜಾಗೃತಿ ಅರಿವನ್ನು ಮೂಡಿಸಿದರು. ನಗರಸಭಾ ಸದಸ್ಯ ಸಂತೋಷ್ ಬೊಳುವಾರು ಅವರು ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭ ನಗರಸಭೆ ಸಮುದಾಯ ಸಂಘಟಕ ಕರುಣಾಕರ ವಿ, ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ, ಸಮಾಜಕಲ್ಯಾಣ ಇಲಾಖೆಯ ಮ್ಯಾನೇಜರ್ ಕೃಷ್ಣ ಬಿ ಸಹಿತ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಮೇಲ್ವಿಚಾರಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here