ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ:ಮುಂಡೂರಿನ ಚಂದ್ರಶೇಖರರಿಗೆ ಹಲವು ಬಹುಮಾನ

0

‌ಪುತ್ತೂರು: ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆ. 2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ನಡುಬೈಲು ಚಂದ್ರಶೇಖರ ಕಿ.ಮೀ ವೇಗದ ನಡಿಗೆ, 4×400ಮೀ ರಿಲೇ ಹಾಗೂ
4×100 ಮೀ ರಿಲೇಯಲ್ಲಿ ದ್ವಿತೀಯ ಮತ್ತು 4×100 ಮೀ ಮಿಕ್ಸೆಡ್ ರಿಲೇಯಲ್ಲಿ ತೃತೀಯ ಸ್ಥಾನ ಗಳಿಸಿ, ಸೆಪ್ಟೆಂಬರ್‌ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

ಪುತ್ತೂರು ಭೂ ಕಂದಾಯ ಇಲಾಖೆಯಲ್ಲಿ ಸರ್ವೇಯರ್ ರವರ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here