ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ, ಭಜನಾ ಕಾರ್ಯಕ್ರಮ

0

ಪುತ್ತೂರು: ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭ ಫೆ.3ರಂದು ರಾತ್ರಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಪುತ್ತೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಫೆ.4ರಂದು ರಾತ್ರಿ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಕೆಮ್ಮಾಯಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಭಂಡಾರ ತೆಗೆದು ಪಿಲಿಭೂತ ದೈವದ ನೇಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಪತಿ ಬೈಪಾಡಿತ್ತಾಯ, ಗೌರವಾಧ್ಯಕ್ಷ ಡಾ|ಅಶೋಕ್ ಪಡಿವಾಳ್ ಮೂಡಾಯೂರುಗುತ್ತು, ಶ್ರೀಧರ ಬೈಪಾಡಿತ್ತಾಯ ದೇವಸ್ಥಾನದ ಅರ್ಚಕ ವೃಂದ, ಬೈಪಾಡಿತ್ತಾಯ ಕುಟುಂಬಸ್ಥರು, ಶ್ರೀವಿಷ್ಣು ಮೂರ್ತಿ ಭಜನಾ ಮಂಡಳಿ ಅಧ್ಯಕ್ಷ ಉಮಾವತಿ ಹೊನ್ನಪ್ಪ ಗೌಡ ಕೆಮ್ಮಾಯಿ, ಕಾರ್ಯದರ್ಶಿ ಅಶೋಕ್ ಹೆಚ್, ಸರ್ವ ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಭಕ್ತರು ದೈವದ ಬೂಳ್ಯ ಪ್ರಸಾದ, ಅನ್ನಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here