ಉಪ್ಪಿನಂಗಡಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ರಾಧಾ ನಿಧನ

0

ಉಪ್ಪಿನಂಗಡಿ: ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಇಲ್ಲಿನ ನಿನ್ನಿಕಲ್ಲ್ ನಿವಾಸಿ ಶ್ರೀಮತಿ ರಾಧಾ (66) ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಫೆ.7ರಂದು ನಿಧನರಾದರು.


ಶ್ರೀ ಮಾಧವ ಶಿಶು ಮಂದಿರದ ಮಾತೃ ಮಂಡಳಿ, ವನಿತಾ ಭಜನಾ ಮಂಡಳಿ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಇವರು, ಜ.31ರಂದು ಕಾರ್ಯನಿಮಿತ್ತ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಗುವನ್ನೆತ್ತಿಕೊಂಡು ಬಂದ ಮಹಿಳೆಯೋರ್ವರಿಗೆ ತನ್ನ ಸೀಟು ಬಿಟ್ಟು ಕೊಟ್ಟು ನಿಂತಿದ್ದ ವೇಳೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಹೊರಗೆಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದಾರೂ, ತನ್ನ ದೇಹಾರೋಗ್ಯದಲ್ಲಿ ಯಾವುದೇ ಬೆಳವಣಿಗೆ ಕಾಣಿಸದ ಕಾರಣ ಬುಧವಾರ ಮನೆಗೆ ಕರೆತರಲಾಗಿತ್ತು. ಮನೆ ತಲುಪುತ್ತಿದ್ದಂತೆಯೇ ಅವರು ಸಾವನ್ನಪ್ಪಿದ್ದಾರೆ. ಇವರ ಪತಿ ಕೆಲ ತಿಂಗಳ ಹಿಂದೆಯಷ್ಟೇ ನಿಧನರಾಗಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here