ಅಂತರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಬೆದ್ರಾಳ  ಕಿರಣ್ ಕುಮಾರ್ ಆಯ್ಕೆ

0

ಪುತ್ತೂರು: ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಫೆ. 2 ರಿಂದ 4ರವರೆಗೆ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಬೆದ್ರಾಳ  ಕಿರಣ್ ಕುಮಾರ್ ರವರು (ಚೆನ್ನಪ್ಪ ಗೌಡ ಮತ್ತು ಲಲಿತಾ ದಂಪತಿ ಪುತ್ರ) 200 ಮೀ ಓಟದಲ್ಲಿ ದ್ವಿತೀಯ, ಶಾಟ್ ಪುಟ್ ಮತ್ತು 5 ಕಿ.ಮೀ ನಡಿಗೆಯಲ್ಲಿ ತೃತೀಯ ಸ್ಥಾನ ಗಳಿಸಿ, ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. 

 ಪುತ್ತೂರು ಕ್ಯಾಂಪ್ಕೊ ಚಾಕಲೇಟ್ ಫ್ಯಾಕ್ಟರಿಯಲ್ಲಿ ಉದ್ಯೋಗಿಯಾಗಿರವ ಇವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಎಂಪ್ಲಾಯಿಸ್ ಯೂನಿಯನ್ H.M.S ನ ಸಂಘಟನಾ ಕಾರ್ಯದರ್ಶಿ ಮತ್ತು ಹಿಂದು ಜಾಗರಣ ವೇದಿಕೆಯ ಸದಸ್ಯರಾಗಿದ್ದಾರೆ. ಬೆದ್ರಾಳ ಶ್ರೀ ನಂದಿಕೇಶ್ವರ ಭಜನಾ ಮಂದಿರದ ಸದಸ್ಯ, ಭಾರತ್ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಾಗಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಸ್ವೀಡನ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here