ಕಾವು ಶ್ರೀ ಮುತ್ತುಮಾರಿಯಮ್ಮ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾವು: ಕಾವು ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.7ರಂದು ಸಂಜೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಶ್ರೀದೇವರ ವಾರ್ಷಿಕ ಜಾತ್ರೋತ್ಸವವು ಮಾ.1ರಿಂದ ಮೊದಲ್ಗೊಂಡು ಮಾ.3ರವರಗೆ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.


ಕಾರ್ಯಕ್ರಮವನ್ನು ಕಾವು ನನ್ಯ ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಕಾವು, ಅರಿಯಡ್ಕ ಗ್ರಾ.ಪಂ ಸದಸ್ಯ ಲೋಕೇಶ್ ಚಾಕೋಟೆ, ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ ಸುಂದರ ಪೂಜಾರಿ ಕೆರೆಮಾರು, ಉದ್ಯಮಿಗಳಾದ ಹರೀಶ್ ಕುಂಜತ್ತಾಯ, ರವಿಪ್ರಸಾದ್ ರೈ ಕಾವು, ಕಾವು ನನ್ಯ ತುಡರ್ ಯುವಕ ಮಂಡಲದ ಗೌರವಾಧ್ಯಕ್ಷ ಶೇಷಪ್ಪ ಗೌಡ ಪರನೀರು, ಕಾವು ನವೋದಯ ಒಕ್ಕೂಟದ ಮಾಜಿ ಅಧ್ಯಕ್ಷ ಚಿದಾನಂದ ಆಚಾರ್ಯ ಸಸ್ಪೆಟ್ಟಿ, ಒಡಿಯೂರು ಗ್ರಾಮವಿಕಾಸ ಯೋಜನೆಯ ಈಶ್ವರಮಂಗಲ ವಲಯಾಧ್ಯಕ್ಷ ಶಿವರಾಮ ಪೂಜಾರಿ ಕೆರೆಮಾರು, ಸಂಘಟನಾ ಕಾರ್ಯದರ್ಶಿ ಅವಿನಾಶ್ ಆಚಾರ್ಯ, ಮುತ್ತುಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಬಾಲಕೃಷ್ಣ ಪಿ, ಕಾರ್ಯದರ್ಶಿ ಕಿಶೋರ್, ಧರ್ಮಲಿಂಗಂ ರವರು ಪಾಲ್ಗೊಂಡಿದ್ದರು. ಸುಧೀಂದ್ರರವರು ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here